Featured

ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ; ಯಾವುದೇ ವಿಚಾರದಲ್ಲಿ ಬೇಧ ಭಾವ ಇಲ್ಲ..:ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್‌ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. 

ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ. 

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ  ಕೇಳಿದ ಪ್ರಶ್ನೆ.

ಕರ್ನಾಟಕ ವಿಕಲಚೇತನ ಸೇವಾ  ಸಂಸ್ಥೆ ಒಕ್ಕೂಟ ಆಯೋಜಿಸಿದ್ದ ಸ್ಪಂದನ ಕಾರ್ಯಕ್ರಮದಲ್ಲಿ  ಸಿಎಂ ಮಾಧ್ಯಮಗಳ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.

‘ನಾನು ಪೆಟ್ರೋಲ್‌ ಡಿಸೇಲ್‌ ಬೆಲೆ ಕೇವಲ 1 ರೂಪಾಯಿ ಹೆಚ್ಚು ಮಾಡಿದರೆ ಮಂಗಳೂರಿನ ಮೀನುಗಾರರ ಮಹಿಳೆಯ ಬಳಿ ”ಕುಮಾರಸ್ವಾಮಿ ಇಸ್‌ ನಾಟ್‌ ಅವರ್‌ ಸಿಎಂ” ಅಂತ ಹೇಳಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ 11 ಬಾರಿ ಬೆಲೆ ಏರಿಕೆ ಮಾಡಿದಾಗ ಚಕಾರ ಎತ್ತಿಲ್ಲ ಯಾಕೆ’ ಎಂದು ಪ್ರಶ್ನಿಸಿದರು.

‘ನಾನು ಜನಸಾಮಾನ್ಯರ ಪರವಾಗಿರುವ ಸಿಎಂ. ವಿದ್ಯುತ್‌ ಬಿಲ್‌ 10 ರೂಪಾಯಿ ಮಾತ್ರ ಏರಿಕೆ ಮಾಡಿದ್ದೇನೆ. ಬಡವರೂ ಕೂಡ 20 ರೂಪಾಯಿ ಕೊಟ್ಟು ಮಿನರಲ್‌ ವಾಟರ್‌ ಖರೀದಿಸುತ್ತಾರೆ’ ಎಂದು ತನ್ನ ಸರ್ಕಾರ ತೆರಿಗೆ ಹೆಚ್ಚಳದ ಕ್ರಮವನ್ನು ಸಮರ್ಥಿಸಿಕೊಂಡರು.

‘ನಾನು ಮುಖ್ಯಮಂತ್ರಿ ಆಗಿ ಕೇವಲ 2 ತಿಂಗಳು ಆಗಿದೆ. ಸಮಸ್ಯೆಗಳೆಲ್ಲಾ 70 ವರ್ಷಗಳಿಂದ ಇರಲಿಲ್ಲವೇ? ನಾನು ಬಡವರ ಪರ ಕಾಳಜಿಯುಳ್ಳ ಎಲ್ಲಾ ಜಿಲ್ಲೆಗಳ ಸಿಎಂ. ಟೀಕೆ ಮಾಡುವುದನ್ನ ನಿಲ್ಲಿಸಿ. ನನಗೆ ಸ್ವಲ್ಪ ಕಾಲಾವಕಾಶ ನೀಡಿ’ ಎಂದು ಮನವಿ ಮಾಡಿದರು.

‘ಮಾಧ್ಯಮಗಳು ಯಾವುದೇ ವಿಷಯವಿಲ್ಲದೆ ಸುದ್ದಿ ಮಾಡುತ್ತೀರಿ. ಜನರ ನಡುವೆ ಕಂದಕ ಸೃಷ್ಟಿಸುತ್ತೀರಿ ನಮ್ಮ ನಡುವೆ ಅನುಮಾನ ಮೂಡಿಸುತ್ತೀರಿ’ ಎಂದು ಕಿಡಿ ಕಾರಿದರು.

‘ನನ್ನ ಮೇಲೆ ನಿಮಗೆ ಕನಿಕರ ಇಲ್ಲವೆ ? ಯಾಕೆ ನನ್ನ ಮೇಲೆ ಇಷ್ಟು ಕೋಪ ? ಎಷ್ಟು ದಿನ ಅಂತ ನನ್ನ ಮೇಲೆ ಸುಳ್ಳು ಸುದ್ದಿ ಮಾಡುತೀರಿ? ಅಪಪ್ರಚಾರ ಮಾಡಬೇಡಿ’ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago