ನವದೆಹಲಿ: ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡದಂತೆ ಅವಶ್ಯ ಕ್ರಮ ವಹಿಸುವುದಾಗಿ ವಿರೋಧಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.
ಅಸ್ಸಾಂನ ವಿರೋಧ ಪಕ್ಷದ ಶಾಸಕರೊಂದಿಗೆ ಸಂವಾದ ನಡೆಸಿದ ಅವರು, ಬಿಜೆಪಿ ಸರ್ಕಾರವು ಮೂರ್ಖತನದಿಂದ ಪೌರತ್ವ ತಿದ್ದುಪಡಿ ಕಾಯಿದೆಯನ್ನು ತರಾತುರಿಯಲ್ಲಿ ಜಾರಿಗೆ ತರಲು ಸಿದ್ದತೆ ನಡೆಸಿತ್ತು. ಆದರೆ ಈವರೆಗೆ ಅದು ಸಾಧ್ಯವಾಗಿಲ್ಲ. ಮುಂದೆ ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದಲ್ಲಿ ಯಾವುದೇ ಕಾರಣಕ್ಕೂ ಈ ಕಾಯಿದೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದರು.
ಅಸ್ಸಾಂಗೆ ಪೌರತ್ವ ಎಂಬುದು ಪ್ರಮುಖ ವಿಷಯವಾಗಿದೆ. ದೇಶಾದ್ಯಂತ ಈ ಕಾಯಿದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಹಳ ಉತ್ಸುಕವಾಗಿದೆ. ಆದರೆ ಅದನ್ನು ಇನ್ನೂ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮುಂದೆಯೂ ಜಾರಿಗೊಳಿಸಲು ಬಿಡುವುದಿಲ್ಲ. ಸಂವಿಧಾನವು ಇಂದು ಅಪಾಯದಲ್ಲಿದ್ದು, ಅದನ್ನು ಅಧಿಕಾರದಲ್ಲಿ ಇರುವವವರಿಂದ ರಕ್ಷಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ರಾಷ್ಟ್ರಪತಿ ಭವನದಲ್ಲಿ ನಾನಿದ್ದರೆ ಖಂಡಿತಾ ಅದನ್ನು ಮಾಡುತ್ತೇನೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…