ನವದೆಹಲಿ: ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡದಂತೆ ಅವಶ್ಯ ಕ್ರಮ ವಹಿಸುವುದಾಗಿ ವಿರೋಧಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.
ಅಸ್ಸಾಂನ ವಿರೋಧ ಪಕ್ಷದ ಶಾಸಕರೊಂದಿಗೆ ಸಂವಾದ ನಡೆಸಿದ ಅವರು, ಬಿಜೆಪಿ ಸರ್ಕಾರವು ಮೂರ್ಖತನದಿಂದ ಪೌರತ್ವ ತಿದ್ದುಪಡಿ ಕಾಯಿದೆಯನ್ನು ತರಾತುರಿಯಲ್ಲಿ ಜಾರಿಗೆ ತರಲು ಸಿದ್ದತೆ ನಡೆಸಿತ್ತು. ಆದರೆ ಈವರೆಗೆ ಅದು ಸಾಧ್ಯವಾಗಿಲ್ಲ. ಮುಂದೆ ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದಲ್ಲಿ ಯಾವುದೇ ಕಾರಣಕ್ಕೂ ಈ ಕಾಯಿದೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದರು.
ಅಸ್ಸಾಂಗೆ ಪೌರತ್ವ ಎಂಬುದು ಪ್ರಮುಖ ವಿಷಯವಾಗಿದೆ. ದೇಶಾದ್ಯಂತ ಈ ಕಾಯಿದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಹಳ ಉತ್ಸುಕವಾಗಿದೆ. ಆದರೆ ಅದನ್ನು ಇನ್ನೂ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮುಂದೆಯೂ ಜಾರಿಗೊಳಿಸಲು ಬಿಡುವುದಿಲ್ಲ. ಸಂವಿಧಾನವು ಇಂದು ಅಪಾಯದಲ್ಲಿದ್ದು, ಅದನ್ನು ಅಧಿಕಾರದಲ್ಲಿ ಇರುವವವರಿಂದ ರಕ್ಷಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ರಾಷ್ಟ್ರಪತಿ ಭವನದಲ್ಲಿ ನಾನಿದ್ದರೆ ಖಂಡಿತಾ ಅದನ್ನು ಮಾಡುತ್ತೇನೆ ಎಂದು ತಿಳಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…