ನವದೆಹಲಿ: ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡದಂತೆ ಅವಶ್ಯ ಕ್ರಮ ವಹಿಸುವುದಾಗಿ ವಿರೋಧಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.
ಅಸ್ಸಾಂನ ವಿರೋಧ ಪಕ್ಷದ ಶಾಸಕರೊಂದಿಗೆ ಸಂವಾದ ನಡೆಸಿದ ಅವರು, ಬಿಜೆಪಿ ಸರ್ಕಾರವು ಮೂರ್ಖತನದಿಂದ ಪೌರತ್ವ ತಿದ್ದುಪಡಿ ಕಾಯಿದೆಯನ್ನು ತರಾತುರಿಯಲ್ಲಿ ಜಾರಿಗೆ ತರಲು ಸಿದ್ದತೆ ನಡೆಸಿತ್ತು. ಆದರೆ ಈವರೆಗೆ ಅದು ಸಾಧ್ಯವಾಗಿಲ್ಲ. ಮುಂದೆ ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದಲ್ಲಿ ಯಾವುದೇ ಕಾರಣಕ್ಕೂ ಈ ಕಾಯಿದೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದರು.
ಅಸ್ಸಾಂಗೆ ಪೌರತ್ವ ಎಂಬುದು ಪ್ರಮುಖ ವಿಷಯವಾಗಿದೆ. ದೇಶಾದ್ಯಂತ ಈ ಕಾಯಿದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಹಳ ಉತ್ಸುಕವಾಗಿದೆ. ಆದರೆ ಅದನ್ನು ಇನ್ನೂ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮುಂದೆಯೂ ಜಾರಿಗೊಳಿಸಲು ಬಿಡುವುದಿಲ್ಲ. ಸಂವಿಧಾನವು ಇಂದು ಅಪಾಯದಲ್ಲಿದ್ದು, ಅದನ್ನು ಅಧಿಕಾರದಲ್ಲಿ ಇರುವವವರಿಂದ ರಕ್ಷಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ರಾಷ್ಟ್ರಪತಿ ಭವನದಲ್ಲಿ ನಾನಿದ್ದರೆ ಖಂಡಿತಾ ಅದನ್ನು ಮಾಡುತ್ತೇನೆ ಎಂದು ತಿಳಿಸಿದರು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…