ಮೈಸೂರು, : “ನಾನು ರೆಬಲ್ ಅಲ್ಲ, ಲಾಯಲ್. ನಿಯಮ ಪಾಲನೆಗಾಗಿ ಈ ರೀತಿಯ ಪತ್ರ ಬರೆದಿದ್ದೇನೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಎಂ ಬಿ.ಎಸ್.ವೈ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಯಮಗಳ ಅನುಸಾರ ಅನುದಾನ ಬಿಡುಗಡೆ ಮಾಡಿದ್ದರೆ ನಾನು ಆಕ್ಷೇಪ ಮಾಡುತ್ತಿರಲಿಲ್ಲ. ಬಜೆಟ್ನಲ್ಲಿ ಘೋಷಣೆಯಾದ ಹಣವನ್ನು ಆರ್ಥಿಕ ಇಲಾಖೆ ಆಯಾ ಇಲಾಖೆಗೆ ಬಿಡುಗಡೆ ಮಾಡಲಿದೆ. ಆದರೆ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನಿಯಮ ಮೀರಿ ಮಧ್ಯಪ್ರವೇಶ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿ ಅನುದಾನ ಬಿಡುಗಡೆಗೆ ಪತ್ರದ ಮೂಲಕ ತಿಳಿಸಿದ್ದಾರೆ. ನಾನು ಇದಕ್ಕೆ ಆಕ್ಷೇಪಿಸಿದ್ದೇನೆ” ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್-Vishwanews24
“ಸಿಎಂ ಯಡಿಯೂರಪ್ಪ ಅವರು ನನ್ನ ಇಲಾಖೆಯ ಪ್ರಿನ್ಸ್ಪಲ್ ಸೆಕ್ರೇಟರಿಗೆ 65 ಕೋಟಿ ಅನುದಾನ ಬಿಡುಗಡೆ ಬಗ್ಗೆ ತಡೆ ಹಿಡಿಯಲಾಗಿದ್ದಂತ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದರು. ನಮ್ಮ ಸೆಕ್ರೇಟರಿ ನನ್ನ ಬಳಿ ಕೇಳಿದಾಗ ನಿಯಮದ ಪ್ರಕಾರ ಏನು ಕ್ರಮ ಕೈಗೊಳ್ಳುತ್ತೀರೋ ಕೈಗೊಳ್ಳಿ ಎಂದು ಹೇಳಿದ್ದೆ. ಈ ಬಗ್ಗೆ ನಾನು ವಿವಿಧ ಅಧಿಕಾರಿಗಳ ಬಳಿ ಇದು ಸರಿನಾ ಎಂದು ಚರ್ಚೆ ನಡೆಸಿದಾಗ ಇದು ನಿಯಮಾನುಸಾರ ತಪ್ಪು ಎಂದು ತಿಳಿಯಿತು” ಎಂದು ಹೇಳಿದ್ದಾರೆ.
“ಇಲಾಖೆಯ ಹಣವನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ಬಾರದಂತೆ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿಗೆ ನಿಯಮಬಾಹಿರವಾಗಿ ಬಿಡುಗಡೆಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದರೆ ಇದು ಎಷ್ಟು ಸರಿ. ಈ ಕಾರಣಕ್ಕಾಗಿ ನಾನು ಸಿಎಂ ಅವರ ನಡೆಯ ಬಗ್ಗೆ ರಾಜ್ಯಪಾಲರಿಗೆ ಹಾಗೂ ಉಸ್ತುವಾರಿ ಸಚಿವ ಅರುಣ್ ಸಿಂಗ್ ಅವರಿಗೆ ಪತ್ರ ಬರೆದಿದ್ದೆ” ಎಂದು ತಿಳಿಸಿದ್ದಾರೆ,
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…