ಮೈಸೂರು, : “ನಾನು ರೆಬಲ್ ಅಲ್ಲ, ಲಾಯಲ್. ನಿಯಮ ಪಾಲನೆಗಾಗಿ ಈ ರೀತಿಯ ಪತ್ರ ಬರೆದಿದ್ದೇನೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಎಂ ಬಿ.ಎಸ್.ವೈ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಯಮಗಳ ಅನುಸಾರ ಅನುದಾನ ಬಿಡುಗಡೆ ಮಾಡಿದ್ದರೆ ನಾನು ಆಕ್ಷೇಪ ಮಾಡುತ್ತಿರಲಿಲ್ಲ. ಬಜೆಟ್ನಲ್ಲಿ ಘೋಷಣೆಯಾದ ಹಣವನ್ನು ಆರ್ಥಿಕ ಇಲಾಖೆ ಆಯಾ ಇಲಾಖೆಗೆ ಬಿಡುಗಡೆ ಮಾಡಲಿದೆ. ಆದರೆ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನಿಯಮ ಮೀರಿ ಮಧ್ಯಪ್ರವೇಶ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿ ಅನುದಾನ ಬಿಡುಗಡೆಗೆ ಪತ್ರದ ಮೂಲಕ ತಿಳಿಸಿದ್ದಾರೆ. ನಾನು ಇದಕ್ಕೆ ಆಕ್ಷೇಪಿಸಿದ್ದೇನೆ” ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್-Vishwanews24
“ಸಿಎಂ ಯಡಿಯೂರಪ್ಪ ಅವರು ನನ್ನ ಇಲಾಖೆಯ ಪ್ರಿನ್ಸ್ಪಲ್ ಸೆಕ್ರೇಟರಿಗೆ 65 ಕೋಟಿ ಅನುದಾನ ಬಿಡುಗಡೆ ಬಗ್ಗೆ ತಡೆ ಹಿಡಿಯಲಾಗಿದ್ದಂತ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದರು. ನಮ್ಮ ಸೆಕ್ರೇಟರಿ ನನ್ನ ಬಳಿ ಕೇಳಿದಾಗ ನಿಯಮದ ಪ್ರಕಾರ ಏನು ಕ್ರಮ ಕೈಗೊಳ್ಳುತ್ತೀರೋ ಕೈಗೊಳ್ಳಿ ಎಂದು ಹೇಳಿದ್ದೆ. ಈ ಬಗ್ಗೆ ನಾನು ವಿವಿಧ ಅಧಿಕಾರಿಗಳ ಬಳಿ ಇದು ಸರಿನಾ ಎಂದು ಚರ್ಚೆ ನಡೆಸಿದಾಗ ಇದು ನಿಯಮಾನುಸಾರ ತಪ್ಪು ಎಂದು ತಿಳಿಯಿತು” ಎಂದು ಹೇಳಿದ್ದಾರೆ.
“ಇಲಾಖೆಯ ಹಣವನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ಬಾರದಂತೆ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿಗೆ ನಿಯಮಬಾಹಿರವಾಗಿ ಬಿಡುಗಡೆಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದರೆ ಇದು ಎಷ್ಟು ಸರಿ. ಈ ಕಾರಣಕ್ಕಾಗಿ ನಾನು ಸಿಎಂ ಅವರ ನಡೆಯ ಬಗ್ಗೆ ರಾಜ್ಯಪಾಲರಿಗೆ ಹಾಗೂ ಉಸ್ತುವಾರಿ ಸಚಿವ ಅರುಣ್ ಸಿಂಗ್ ಅವರಿಗೆ ಪತ್ರ ಬರೆದಿದ್ದೆ” ಎಂದು ತಿಳಿಸಿದ್ದಾರೆ,
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…