ಬೆಂಗಳೂರು: ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ ಎಂದು ನಟಿ ರನ್ಯಾ ರಾವ್ ದೂರು ನೀಡಿದ್ದಾಳೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಈಗ ದೂರು ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾಳೆ.
ಪರಪ್ಪನ ಅಗ್ರಹಾರ ಜೈಲರ್ಗೆ ದೂರು ನೀಡಿರುವ ರನ್ಯಾ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾಳೆ.
ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ದುಬೈನಲ್ಲಿ ನನಗೆ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದೆ. ಈ ಕಾರಣಕ್ಕೆ ನಾನು ದುಬೈಗೆ ತೆರಳಿದ್ದೆ. ಮಾರ್ಚ್ 3 ರಂದು ಬೆಳಗ್ಗೆ ಹೋಗಿ ಕೆಲಸ ಮುಗಿಸಿದ ಬಳಿಕ ತಕ್ಷಣ ಮರಳಿದ್ದೇನೆ ಎಂದು ಹೇಳಿದ್ದಾಳೆ.
ಜೈಲರ್ಗೆ ಸಲ್ಲಿಸಿದ ದೂರನ್ನು ಪೊಲೀಸ್ ಅಧಿಕಾರಿಗಳು ಡಿಆರ್ಐಗೆ ವರ್ಗಾವಣೆ ಮಾಡಿದ್ದಾರೆ. ಈಗ ಡಿಆರ್ಐ ಅಧಿಕಾರಿಗಳು ದೂರನ್ನು ಪರಿಶೀಲನೆ ಮಾಡುತ್ತಿದ್ದಾರೆ.
ರನ್ಯಾ ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಮೇಲೆ ಕಣ್ಣಿಟ್ಟಿದ್ದರು.
ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ಸಹ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ.
ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…