Featured

ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿ : ನಟಿ ರನ್ಯಾ ರಾವ್‌  – vishwanews24

ನನ್ನ ಮೇಲೆ ಸುಳ್ಳು ಆರೋಪ , ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ : ನಟಿ ರನ್ಯಾ ರಾವ್‌

ಬೆಂಗಳೂರು: ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ ಎಂದು ನಟಿ ರನ್ಯಾ ರಾವ್‌  ದೂರು ನೀಡಿದ್ದಾಳೆ.

ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ  ರನ್ಯಾ ರಾವ್‌ ಈಗ ದೂರು ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದ್ದಾಳೆ.

ಪರಪ್ಪನ ಅಗ್ರಹಾರ ಜೈಲರ್‌ಗೆ ದೂರು ನೀಡಿರುವ ರನ್ಯಾ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾಳೆ.

ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ದುಬೈನಲ್ಲಿ ನನಗೆ ರಿಯಲ್‌ ಎಸ್ಟೇಟ್‌ ಬಿಸಿನೆಸ್‌ ಮಾಡುತ್ತಿದ್ದೆ. ಈ ಕಾರಣಕ್ಕೆ ನಾನು ದುಬೈಗೆ ತೆರಳಿದ್ದೆ. ಮಾರ್ಚ್ 3 ರಂದು ಬೆಳಗ್ಗೆ ಹೋಗಿ ಕೆಲಸ ಮುಗಿಸಿದ ಬಳಿಕ ತಕ್ಷಣ ಮರಳಿದ್ದೇನೆ ಎಂದು ಹೇಳಿದ್ದಾಳೆ.

ಜೈಲರ್‌ಗೆ ಸಲ್ಲಿಸಿದ ದೂರನ್ನು ಪೊಲೀಸ್‌ ಅಧಿಕಾರಿಗಳು ಡಿಆರ್‌ಐಗೆ ವರ್ಗಾವಣೆ ಮಾಡಿದ್ದಾರೆ. ಈಗ ಡಿಆರ್‌ಐ ಅಧಿಕಾರಿಗಳು ದೂರನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರನ್ಯಾ ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಮೇಲೆ ಕಣ್ಣಿಟ್ಟಿದ್ದರು.

ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ಸಹ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ.

ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್‌ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago