Featured

ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿ : ನಟಿ ರನ್ಯಾ ರಾವ್‌  – vishwanews24

ನನ್ನ ಮೇಲೆ ಸುಳ್ಳು ಆರೋಪ , ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ : ನಟಿ ರನ್ಯಾ ರಾವ್‌

ಬೆಂಗಳೂರು: ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ ಎಂದು ನಟಿ ರನ್ಯಾ ರಾವ್‌  ದೂರು ನೀಡಿದ್ದಾಳೆ.

ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ  ರನ್ಯಾ ರಾವ್‌ ಈಗ ದೂರು ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದ್ದಾಳೆ.

ಪರಪ್ಪನ ಅಗ್ರಹಾರ ಜೈಲರ್‌ಗೆ ದೂರು ನೀಡಿರುವ ರನ್ಯಾ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾಳೆ.

ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ದುಬೈನಲ್ಲಿ ನನಗೆ ರಿಯಲ್‌ ಎಸ್ಟೇಟ್‌ ಬಿಸಿನೆಸ್‌ ಮಾಡುತ್ತಿದ್ದೆ. ಈ ಕಾರಣಕ್ಕೆ ನಾನು ದುಬೈಗೆ ತೆರಳಿದ್ದೆ. ಮಾರ್ಚ್ 3 ರಂದು ಬೆಳಗ್ಗೆ ಹೋಗಿ ಕೆಲಸ ಮುಗಿಸಿದ ಬಳಿಕ ತಕ್ಷಣ ಮರಳಿದ್ದೇನೆ ಎಂದು ಹೇಳಿದ್ದಾಳೆ.

ಜೈಲರ್‌ಗೆ ಸಲ್ಲಿಸಿದ ದೂರನ್ನು ಪೊಲೀಸ್‌ ಅಧಿಕಾರಿಗಳು ಡಿಆರ್‌ಐಗೆ ವರ್ಗಾವಣೆ ಮಾಡಿದ್ದಾರೆ. ಈಗ ಡಿಆರ್‌ಐ ಅಧಿಕಾರಿಗಳು ದೂರನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರನ್ಯಾ ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಮೇಲೆ ಕಣ್ಣಿಟ್ಟಿದ್ದರು.

ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ಸಹ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ.

ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್‌ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

19 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

19 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

20 hours ago