Featured

ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ – vishwanews24

ಅಧರ್ಮದ ಜಗತ್ತನ್ನು ತೊರೆದು, ಸತ್ಯದ ಕಡೆ ಹೋಗುತ್ತಿದ್ದೇನೆ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ

ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ.

ಮೋಹಿತ್ ಋಷಿ ನಾಪತ್ತೆಯಾದ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ.

ಜನವರಿ 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾನೆ. ಪುಸ್ತಕದಲ್ಲಿ ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ ಎಂದು ಬರೆದಿದ್ದಾನೆ.

ಈ ಬಗ್ಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ಪೋಷಕರು ದೂರು ನೀಡಿದ್ದಾರೆ. ಸದ್ಯ ಉತ್ತರ ಪ್ರದೇಶದ ಪ್ರಯಾಜ್ ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಮೋಹಿತ್ ಪ್ರಯಾಗ್ ರಾಜ್‌ಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಟಿವಿ ಪರಿಶೀಲನೆ ಮಾಡಿ ಹುಡುಕಾಡುತ್ತಿರುವ ಪೊಲೀಸರು, ಮೋಹಿತ್ ಪ್ರಯಾಗ್‌ರಾಜ್‌ಗೆ ಹೋಗಿರುವ ಸಾಧ್ಯತೆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಯ ಪೋಷಕರು ಸೋಷಿಯಲ್ ಮೀಡಿಯಾದಲ್ಲಿಯೂ ಫೋಟೋ ಹಾಕಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

Vishwa News 24

Recent Posts

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

37 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

45 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago