ಉಡುಪಿ,:ಪ್ರಮೋದ್ ಮಧ್ವರಾಜ್ ಅವರು ಲೋಕಸಭೆ ಚುನಾವಣೆ ಸಮಯದಲ್ಲಿ ತಾಂತ್ರಿಕ ಕಾರಣಕ್ಕೆ ಜೆಡಿಎಸ್ ಪಕ್ಷ ಸೇರಿದ್ದರು, ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್ಗೆ ರಾಜೀನಾಮೆ ಸಲ್ಲಿಸಿದ್ದರು.
ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ರಘುಪತಿ ಭಟ್, ‘ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಗೇಟ್ ಓಪನ್ ಆಗಿದೆ’ ಎಂದಿದ್ದರು. ರಘುಪತಿ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮಧ್ವರಾಜ್, ‘ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ‘
ರಘುಪತಿ ಭಟ್ ಅನೇಕ ಸುಳ್ಳುಗಳನ್ನು ಹೇಳಿ ಕಳೆದ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆದ್ದಿದ್ದಾರೆ ಅವರು ಕೊಟ್ಟ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಪ್ರಮುಖವಾಗಿ ತಾನು ಗೆದ್ದ 30 ದಿನಗಳ ಒಳಗೆ ಮರಳಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು ಆದರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ’ ಎಂದರು.
ನಾನು ಶಾಸಕನಾಗಿ, ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿದ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ. ಕೆಲವೊಂದು ತಾನು ಮಂಜೂರು ಮಾಡಿದ ಕಾಮಾಗಾರಿಗಳಿಗೂ ತಡೆಯೊಡ್ಡುವ ಕೆಲಸವನ್ನು ರಘುಪತಿ ಭಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ರಘುಪತಿ ಭಟ್ ಅವರು ಶಾಸಕನಾಗಿ ಈಗಾಗಲೇ ವಿಫಲವಾಗಿದ್ದಾರೆ, ಇನ್ನಾದರೂ ಅವರು ಕ್ಷೇತ್ರದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ನನ್ನ ರಾಜಕೀಯ ನಡೆಯ ಬಗ್ಗೆ ರಘುಪತಿ ಭಟ್ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…