Featured

ನಾನು ಶಾಸಕನಾಗಿ, ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿದ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ : ರಘುಪತಿ ಭಟ್ ಗೆ ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ,:ಪ್ರಮೋದ್ ಮಧ್ವರಾಜ್ ಅವರು ಲೋಕಸಭೆ ಚುನಾವಣೆ ಸಮಯದಲ್ಲಿ ತಾಂತ್ರಿಕ ಕಾರಣಕ್ಕೆ ಜೆಡಿಎಸ್ ಪಕ್ಷ ಸೇರಿದ್ದರು, ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ರಘುಪತಿ ಭಟ್, ‘ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಗೇಟ್ ಓಪನ್ ಆಗಿದೆ’ ಎಂದಿದ್ದರು. ರಘುಪತಿ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮಧ್ವರಾಜ್, ‘ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ‘

ರಘುಪತಿ ಭಟ್ ಅನೇಕ ಸುಳ್ಳುಗಳನ್ನು ಹೇಳಿ ಕಳೆದ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆದ್ದಿದ್ದಾರೆ ಅವರು ಕೊಟ್ಟ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಪ್ರಮುಖವಾಗಿ ತಾನು ಗೆದ್ದ 30 ದಿನಗಳ ಒಳಗೆ ಮರಳಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು ಆದರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ’ ಎಂದರು.

ನಾನು ಶಾಸಕನಾಗಿ, ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿದ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ. ಕೆಲವೊಂದು ತಾನು ಮಂಜೂರು ಮಾಡಿದ ಕಾಮಾಗಾರಿಗಳಿಗೂ ತಡೆಯೊಡ್ಡುವ ಕೆಲಸವನ್ನು ರಘುಪತಿ ಭಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ರಘುಪತಿ ಭಟ್ ಅವರು ಶಾಸಕನಾಗಿ ಈಗಾಗಲೇ ವಿಫಲವಾಗಿದ್ದಾರೆ, ಇನ್ನಾದರೂ ಅವರು ಕ್ಷೇತ್ರದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ನನ್ನ ರಾಜಕೀಯ ನಡೆಯ ಬಗ್ಗೆ ರಘುಪತಿ ಭಟ್ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

Vishwa News 24

Recent Posts

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago