ಉಡುಪಿ: ಸತ್ತು ಮಲಗಿದ ನನ್ನ ಮೇಲೆ ಬಿಜೆಪಿಯ ಬಾವುಟ ಇರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಯ ಪಕ್ಷಕ್ಕೆ ನಾನು ದೇವರಾಣೆಗೂ ಹೋಗುವುದಿಲ್ಲ. ನನ್ನ ಜೊತೆ ಜನ ಇದ್ದಾರೆ ಎಂದ ತಕ್ಷಣ ನಾನು ಪಕ್ಷೇತರನಾಗಿ ನಿಲ್ಲುವುದಿಲ್ಲ. ಬೇರೆ ಬೇರೆ ಪಕ್ಷಗಳಿಂದ ಕರೆ ಬಂದಿದೆ, ಆದರೆ ನಾನು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ರಘುಪತಿ ಭಟ್ರು ಬಿಜೆಪಿ. ನಾನು ಸಾಯುವಾಗ ಬಿಜೆಪಿಯ ಬಾವುಟ ನನ್ನ ಮೇಲೆ ಬೀಳಬೇಕು. ನಾನು ಪಕ್ಷೇತರ ನಿಲ್ಲುತ್ತೇನೆ, ನಿಲ್ಲುವುದಿಲ್ಲ ಎಂದು ಹೇಳಲು ನಾನಿನ್ನು ನಿರ್ಧಾರವೇ ಮಾಡಿಲ್ಲ. ನಾನು ಇನ್ನು ಶಾಕ್ನಿಂದ ಹೊರಗೆ ಬಂದಿಲ್ಲ ಎಂದು ಹೇಳಿದರು.
ಯಾವುದೇ ನಿರ್ಧಾರವಾದರೂ ನಾನೇ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಮಾತ್ರ ಪಡೆಯುತ್ತೇನೆ. ನಾನು ಸಭೆ ಸೇರಿಸುತ್ತೇನೆ. ಪಕ್ಷೇತರ ನಿಲ್ಲುತ್ತೇನೆ ಎಂದು ಹೇಳಿಲ್ಲ ಹೇಳುವುದು ಇಲ್ಲ. ನನ್ನ ನಿರ್ಧಾರವನ್ನು ನಾನೇ ಮಾಡುತ್ತೇನೆ. ನಾನು ರಾಜಕೀಯದಿಂದ ದೂರ ಹೋಗುವ ವ್ಯಕ್ತಿಯ ಅಲ್ಲ. ಕಾರ್ಯಕರ್ತರ ಎಲ್ಲ ಕಷ್ಟಗಳಿಗೆ ಜೊತೆಯಾಗಿ ನಿಲ್ಲುತ್ತೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಪಕ್ಷದ ಹಿರಿಯ ಮುಖಂಡರ ಬಗ್ಗೆ ನನಗೆ ಅತೀವವಾದ ಗೌರವವಿದೆ. 15 ವರ್ಷ ಶಾಸಕನಾಗಿದ್ದು ನಾನು ಬೇಡದವನಾಗಿ ಹೋದ್ನಾ?. ನಾನು ಟಿವಿಯಲ್ಲಿ ವಿಚಾರವನ್ನು ತಿಳಿದುಕೊಳ್ಳಬೇಕಾದ ಪರಿಸ್ಥಿತಿ ಬಂತು. ಒಂದು ಫೋನ್ ಕರೆ ಮಾಡಿ ಈ ಕಾರಣಕ್ಕೋಸ್ಕರ ನಿನಗೆ ಟಿಕೆಟ್ ಇಲ್ಲ ಎಂದು ಯಾರೂ ಹೇಳಿಲ್ಲ. ಮುನ್ಸೂಚನೆ ಕೊಟ್ಟಿದ್ರೆ ಈಶ್ವರಪ್ಪ ರೀತಿಯಲ್ಲಿ ರಾಜೀನಾಮೆ ನೀಡುತ್ತಿದ್ದೆ. ನಾನು ವಿಮರ್ಷೆ ಮಾಡಲ್ಲ, ನಿರ್ಧಾರ ಮಾಡಿದವರು ನನಗೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…