ಉಡುಪಿ: ಸತ್ತು ಮಲಗಿದ ನನ್ನ ಮೇಲೆ ಬಿಜೆಪಿಯ ಬಾವುಟ ಇರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಯ ಪಕ್ಷಕ್ಕೆ ನಾನು ದೇವರಾಣೆಗೂ ಹೋಗುವುದಿಲ್ಲ. ನನ್ನ ಜೊತೆ ಜನ ಇದ್ದಾರೆ ಎಂದ ತಕ್ಷಣ ನಾನು ಪಕ್ಷೇತರನಾಗಿ ನಿಲ್ಲುವುದಿಲ್ಲ. ಬೇರೆ ಬೇರೆ ಪಕ್ಷಗಳಿಂದ ಕರೆ ಬಂದಿದೆ, ಆದರೆ ನಾನು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ರಘುಪತಿ ಭಟ್ರು ಬಿಜೆಪಿ. ನಾನು ಸಾಯುವಾಗ ಬಿಜೆಪಿಯ ಬಾವುಟ ನನ್ನ ಮೇಲೆ ಬೀಳಬೇಕು. ನಾನು ಪಕ್ಷೇತರ ನಿಲ್ಲುತ್ತೇನೆ, ನಿಲ್ಲುವುದಿಲ್ಲ ಎಂದು ಹೇಳಲು ನಾನಿನ್ನು ನಿರ್ಧಾರವೇ ಮಾಡಿಲ್ಲ. ನಾನು ಇನ್ನು ಶಾಕ್ನಿಂದ ಹೊರಗೆ ಬಂದಿಲ್ಲ ಎಂದು ಹೇಳಿದರು.
ಯಾವುದೇ ನಿರ್ಧಾರವಾದರೂ ನಾನೇ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಮಾತ್ರ ಪಡೆಯುತ್ತೇನೆ. ನಾನು ಸಭೆ ಸೇರಿಸುತ್ತೇನೆ. ಪಕ್ಷೇತರ ನಿಲ್ಲುತ್ತೇನೆ ಎಂದು ಹೇಳಿಲ್ಲ ಹೇಳುವುದು ಇಲ್ಲ. ನನ್ನ ನಿರ್ಧಾರವನ್ನು ನಾನೇ ಮಾಡುತ್ತೇನೆ. ನಾನು ರಾಜಕೀಯದಿಂದ ದೂರ ಹೋಗುವ ವ್ಯಕ್ತಿಯ ಅಲ್ಲ. ಕಾರ್ಯಕರ್ತರ ಎಲ್ಲ ಕಷ್ಟಗಳಿಗೆ ಜೊತೆಯಾಗಿ ನಿಲ್ಲುತ್ತೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಪಕ್ಷದ ಹಿರಿಯ ಮುಖಂಡರ ಬಗ್ಗೆ ನನಗೆ ಅತೀವವಾದ ಗೌರವವಿದೆ. 15 ವರ್ಷ ಶಾಸಕನಾಗಿದ್ದು ನಾನು ಬೇಡದವನಾಗಿ ಹೋದ್ನಾ?. ನಾನು ಟಿವಿಯಲ್ಲಿ ವಿಚಾರವನ್ನು ತಿಳಿದುಕೊಳ್ಳಬೇಕಾದ ಪರಿಸ್ಥಿತಿ ಬಂತು. ಒಂದು ಫೋನ್ ಕರೆ ಮಾಡಿ ಈ ಕಾರಣಕ್ಕೋಸ್ಕರ ನಿನಗೆ ಟಿಕೆಟ್ ಇಲ್ಲ ಎಂದು ಯಾರೂ ಹೇಳಿಲ್ಲ. ಮುನ್ಸೂಚನೆ ಕೊಟ್ಟಿದ್ರೆ ಈಶ್ವರಪ್ಪ ರೀತಿಯಲ್ಲಿ ರಾಜೀನಾಮೆ ನೀಡುತ್ತಿದ್ದೆ. ನಾನು ವಿಮರ್ಷೆ ಮಾಡಲ್ಲ, ನಿರ್ಧಾರ ಮಾಡಿದವರು ನನಗೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…