ಗೋವಾ : ಗೋವಾ ರಾಜ್ಯಕ್ಕೆ ಮೂರು ದಿನ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನಾನು ಸಿಎಂ ಆಗಲು ಇಲ್ಲಿ ಬಂದಿಲ್ಲ, ಆದರೆ ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಗುರುವಾರ ಸಂಜೆ ಮಮತಾ ಬ್ಯಾನರ್ಜಿ ಗೋವಾ ತಲುಪಿದ್ದರು.
“ಮೀನು ಮತ್ತು ಫುಟ್ಬಾಲ್” ಬಂಗಾಳ ಮತ್ತು ಗೋವಾವನ್ನು ಸಂಪರ್ಕಿಸುವ ಎರಡು ವಿಷಯಗಳಾಗಿವೆ ಎಂದು ಹೇಳಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಕೇಂದ್ರದ “ದಾದಾಗಿರಿ” ನಡೆಯಲು ಬಿಡುವುದಿಲ್ಲ ಎಂದು ಹೇಳಿದರು. ಆದಾಗ್ಯೂ, ಅಧಿಕಾರ ಹಿಡಿಯಲು ಅಥವಾ ಗೋವಾದ ಮುಖ್ಯಮಂತ್ರಿಯಾಗಲು ರಾಜ್ಯಕ್ಕೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ. “ದೆಲ್ಲಿಚಿ ದಾದಾಗಿರಿ ಅನಿಕ್ ನಾಕಾ (ಇನ್ನು ಮುಂದೆ ದೆಹಲಿಯಿಂದ ದಬ್ಬಾಳಿಕೆ ಬೇಡ). ನಾನು ಹೊರಗಿನವಳಲ್ಲ, ಗೋವಾದ ಸಿಎಂ ಆಗಲು ಬಯಸುವುದಿಲ್ಲ” ಎಂದು ಕೊಂಕಣ ಭಾಷೆಯಲ್ಲಿ ಪಣಜಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.
“ನಾನು ಭಾರತೀಯಳು, ನಾನು ಎಲ್ಲಿ ಬೇಕಾದರೂ ಹೋಗಬಹುದು, ಬಂಗಾಳ ನನ್ನ ತಾಯಿನಾಡು, ಗೋವಾ ಕೂಡ ನನ್ನ ತಾಯಿನಾಡು, ನಾನು ಗೋವಾಕ್ಕೆ ಬರುತ್ತೇನೆ, ಅವರು ನನ್ನ ಪೋಸ್ಟರ್ಗಳನ್ನು ಹಾಳು ಮಾಡುತ್ತಾರೆ, ಅವರು (ಬಿಜೆಪಿ) ಮಾನಸಿಕ ಅರೋಗ್ಯ ಸರಿಯಿಲ್ಲ, ಅವರು ನನಗೆ ಕಪ್ಪು ಬಾವುಟ ತೋರಿಸಿದರು ಆದರೆ ನಾನು ನಮಸ್ತೆ ಹೇಳಿದೆ,” ಎಂದು ಮಮತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭೇಟಿಗೆ ಮುನ್ನ ಗೋವಾದಲ್ಲಿ ಅವರ ಚಿತ್ರಗಳನ್ನು ಹೊಂದಿರುವ ಹಲವಾರು ಹೋರ್ಡಿಂಗ್ಗಳನ್ನು ವಿರೂಪಗೊಳಿಸಲಾಗಿತ್ತು. ಇದು ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…