ಗೋವಾ : ಗೋವಾ ರಾಜ್ಯಕ್ಕೆ ಮೂರು ದಿನ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನಾನು ಸಿಎಂ ಆಗಲು ಇಲ್ಲಿ ಬಂದಿಲ್ಲ, ಆದರೆ ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಗುರುವಾರ ಸಂಜೆ ಮಮತಾ ಬ್ಯಾನರ್ಜಿ ಗೋವಾ ತಲುಪಿದ್ದರು.
“ಮೀನು ಮತ್ತು ಫುಟ್ಬಾಲ್” ಬಂಗಾಳ ಮತ್ತು ಗೋವಾವನ್ನು ಸಂಪರ್ಕಿಸುವ ಎರಡು ವಿಷಯಗಳಾಗಿವೆ ಎಂದು ಹೇಳಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಕೇಂದ್ರದ “ದಾದಾಗಿರಿ” ನಡೆಯಲು ಬಿಡುವುದಿಲ್ಲ ಎಂದು ಹೇಳಿದರು. ಆದಾಗ್ಯೂ, ಅಧಿಕಾರ ಹಿಡಿಯಲು ಅಥವಾ ಗೋವಾದ ಮುಖ್ಯಮಂತ್ರಿಯಾಗಲು ರಾಜ್ಯಕ್ಕೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ. “ದೆಲ್ಲಿಚಿ ದಾದಾಗಿರಿ ಅನಿಕ್ ನಾಕಾ (ಇನ್ನು ಮುಂದೆ ದೆಹಲಿಯಿಂದ ದಬ್ಬಾಳಿಕೆ ಬೇಡ). ನಾನು ಹೊರಗಿನವಳಲ್ಲ, ಗೋವಾದ ಸಿಎಂ ಆಗಲು ಬಯಸುವುದಿಲ್ಲ” ಎಂದು ಕೊಂಕಣ ಭಾಷೆಯಲ್ಲಿ ಪಣಜಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.
“ನಾನು ಭಾರತೀಯಳು, ನಾನು ಎಲ್ಲಿ ಬೇಕಾದರೂ ಹೋಗಬಹುದು, ಬಂಗಾಳ ನನ್ನ ತಾಯಿನಾಡು, ಗೋವಾ ಕೂಡ ನನ್ನ ತಾಯಿನಾಡು, ನಾನು ಗೋವಾಕ್ಕೆ ಬರುತ್ತೇನೆ, ಅವರು ನನ್ನ ಪೋಸ್ಟರ್ಗಳನ್ನು ಹಾಳು ಮಾಡುತ್ತಾರೆ, ಅವರು (ಬಿಜೆಪಿ) ಮಾನಸಿಕ ಅರೋಗ್ಯ ಸರಿಯಿಲ್ಲ, ಅವರು ನನಗೆ ಕಪ್ಪು ಬಾವುಟ ತೋರಿಸಿದರು ಆದರೆ ನಾನು ನಮಸ್ತೆ ಹೇಳಿದೆ,” ಎಂದು ಮಮತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭೇಟಿಗೆ ಮುನ್ನ ಗೋವಾದಲ್ಲಿ ಅವರ ಚಿತ್ರಗಳನ್ನು ಹೊಂದಿರುವ ಹಲವಾರು ಹೋರ್ಡಿಂಗ್ಗಳನ್ನು ವಿರೂಪಗೊಳಿಸಲಾಗಿತ್ತು. ಇದು ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…