ಹಾಸನ: ನನ್ನ ಮನೆಗೆ ಐಟಿಯವರು ಬಂದ್ರೆ ನನ್ನ ಮನೆಯಲ್ಲಿ ಇರುವುದು ಯಡಿಯೂರಪ್ಪ ಅವರ ದಾಖಲೆಗಳೇ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ. ದೇವೇಗೌಡರಿಗೆ ರಾಜ್ಯ ಬಿಡಿ ಎಂದು ನಾನೇ ಹೇಳುತ್ತೇನೆ. ಅವರು ಸೋತಿರಬಹುದು, ಆದರೆ ಅವರು ದೇಶದಲ್ಲಿ ಇರಬೇಕು. ಅವರಿಗೆ ಅಧಿಕಾರ ಬೇಡ,ಆದರೆ ಮತ್ತೊಂದು ಕ್ರಾಂತಿಯಾಗಬೇಕು. ಇಲ್ಲವಾದ್ರೆ ದೇಶ ಹಾಳಾಗಲಿದೆ, ಈಗಾಗಲೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ನೇತೃತ್ವ ವಹಿಸಿಕೊಳ್ಳದೇ ಇದ್ದರೆ ದೇಶಕ್ಕೆ ಕಷ್ಟಕಾಲ ಬರಲಿದೆ ಎಂದರು.
ದೇವೇಗೌಡರು ಹಾಸನದಿಂದಲೇ ಲೋಕಸಭಾ ಚುನಾವಣೆಗೆ ನಿಲ್ಲಬೇಕಿತ್ತು. ಲೋಕಸಭೆಯಲ್ಲಿ ಗೌಡರು ಇರಬೇಕಿತ್ತು ಎಂದು ಪಶ್ವತ್ತಾಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವು ಹೆದರಿ ಕೂರೋದಿಲ್ಲ, ರಾಜ್ಯ, ದೇಶದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ದನಿ ಎತ್ತಬೇಕಿದೆ. ಚುನಾವಣಾ ಫಲಿತಾಂಶಕ್ಕೂ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಸಂಬಂಧ ಇಲ್ಲ. ದೇಶದಲ್ಲಿ ಬದಲಾವಣೆಗೆ ಒಂದು ವೇದಿಕೆ ಬೇಕು. ಸತ್ಯಸಂಗತಿಗಳನ್ನು ಧೈರ್ಯವಾಗಿ ಹೇಳಬೇಕಿದೆ ಎಂದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…