Featured

ನಾನು ಸೋಲು ಕಂಡಾಗಲೆಲ್ಲ ಮತ್ತೆ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ ; ಮತ್ತೇ ಹೇಗೆ ಕಟ್ಟಬೇಕು ಎಂಬುದು ನನಗೆ ಗೊತ್ತು : ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು: ’ನಾನು ಸೋಲು ಕಂಡಾಗಲೆಲ್ಲ ಮತ್ತೆ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ. ಯಾವ ಶಾಸಕರೂ ಎದೆಗುಂದಬಾರದು. ಮೈತ್ರಿ ಸರ್ಕಾರಕ್ಕೆ ಒಂದಿಷ್ಟು ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ‘ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಜೆಡಿಎಸ್ ಶಾಸಕರಿಗೆ ಭರವಸೆ ನೀಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನುದ್ದೇಶಿಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧೈರ್ಯ ತುಂಬಿದರು.

‘ಆಪರೇಶನ್ ಕಮಲದ ಭೀತಿಗೆ ಸರ್ಕಾರ ಸಿಲುಕಬಾರದು. ನಮ್ಮ ಪಕ್ಷದ ಯಾವ ಶಾಸಕರೂ ಅತ್ತಿತ್ತ ಹೊರಳಬಾರದು. ನಮ್ಮ ಪಕ್ಷದ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಕಡೆಗೆ ಗಮನ ಕೊಟ್ಟು ಕೆಲಸ ಮಾಡಿದರೆ ಸಾಕು. ಪಕ್ಷವನ್ನು ಮತ್ತೇ ಹೇಗೆ ಕಟ್ಟಬೇಕು ಎಂಬುದು ನನಗೆ ಗೊತ್ತು’ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ‘ಜೆಡಿಎಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ನಮ್ಮ ಪಕ್ಷದ ಶಾಸಕರು ಕಾರ್ಯಕ್ರಮಗಳ ಪಟ್ಟಿ ಕೊಟ್ಟರೆ ಸಾಕು. ಅವುಗಳ ಅನುಷ್ಠಾನ ನನ್ನ ಜವಾಬ್ದಾರಿ. ಈಗಾಗಲೇ ಸಾಕಷ್ಟು ಕೆಲಸಗಳಿಗೆ ಸರ್ಕಾರ ಆಧ್ಯತೆ ನೀಡಿದೆ. ಪಕ್ಷಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಯಾರೂ ಮಾತನಾಡಬಾರದು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ಸರ್ಕಾರ ಸುರಕ್ಷಿತವಾಗಿಡುವ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡಲು ಎಲ್ಲ ಸಚಿವರೂ ಸಿದ್ದರಿದ್ದೇವೆ ಎಂದು ಸಚಿವರು ಅಭಯ ನೀಡಿದರು ಎನ್ನಲಾಗಿದೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

3 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago