ಬೆಂಗಳೂರು: ನಾನು ಹಿಂದೂ ವಿರೋಧಿಯಲ್ಲ. ಹಿಂದುತ್ವದ ವಿರೋಧಿ. ಧರ್ಮ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ನಮ್ಮ ವಿರೋಧ ಖಂಡಿತಾ ಇಲ್ಲ. ಆದರೆ ಬಿಜೆಪಿಯವರು ಇದೇ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಧರ್ಮ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಸಮಾಜದಲ್ಲಿ ಎಲ್ಲಾ ಧರ್ಮಗಳೂ ಸಮಾನವಾಗಿವೆ. ಒಂದು ಧರ್ಮದ ವಿರುದ್ದ ಇನ್ನೊಂದು ಧರ್ಮವನ್ನು ಎತ್ತಿಕಟ್ಟುವುದು ಸರಿಯಲ್ಲ. ಧರ್ಮ, ಜಾತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ಮನಸುಗಳನ್ನು ಒಡೆಯುವುದು ತಪ್ಪು. ನಾನು ಹಿಂದುತ್ವದ ವಿರೋಧಿಯೇ ಹೊರತು ಹಿಂದೂ ವಿರೋಧಿಯಲ್ಲ ಎಂದವರು ಪ್ರತಿಪಾದಿಸಿದರು.
ರಾಮ, ಆಂಜನೇಯ ಮಂದಿರಗಳು ಪ್ರತೀ ಹಳ್ಳಿಗಳಲ್ಲಿವೆ. ನಾವೂ ಅವುಗಳ ನಿರ್ಮಾಣಕ್ಕೆ ಧನಸಹಾಯ ಮಾಡಿದ್ದೇವೆ. ರಾಮಮಂದಿರ ನಿರ್ಮಾಣವಾದರೆ ಎಲ್ಲರಿಗೂ ಖುಷಿಯೇ. ಆದರೆ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ನಿಲುವಿಗೆ ನನ್ನ ವಿರೋಧವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…