Featured

ನಾನು ಹಿಂದೂ ವಿರೋಧಿಯಲ್ಲ, ಹಿಂದುತ್ವದ ವಿರೋಧಿ : ಸಿದ್ದರಾಮಯ್ಯ – Vishwanews24

ನಾನು ಹಿಂದೂ ವಿರೋಧಿಯಲ್ಲ, ಹಿಂದುತ್ವದ ವಿರೋಧಿ; ಧರ್ಮ ರಾಜಕಾರಣ ಮಾಡುವುದು ಸರಿಯಲ್ಲ : ಸಿದ್ದರಾಮಯ್ಯ

ಬೆಂಗಳೂರು: ನಾನು ಹಿಂದೂ ವಿರೋಧಿಯಲ್ಲ. ಹಿಂದುತ್ವದ ವಿರೋಧಿ. ಧರ್ಮ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ನಮ್ಮ ವಿರೋಧ ಖಂಡಿತಾ ಇಲ್ಲ. ಆದರೆ ಬಿಜೆಪಿಯವರು ಇದೇ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಧರ್ಮ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಸಮಾಜದಲ್ಲಿ ಎಲ್ಲಾ ಧರ್ಮಗಳೂ ಸಮಾನವಾಗಿವೆ. ಒಂದು ಧರ್ಮದ ವಿರುದ್ದ ಇನ್ನೊಂದು ಧರ್ಮವನ್ನು ಎತ್ತಿಕಟ್ಟುವುದು ಸರಿಯಲ್ಲ. ಧರ್ಮ, ಜಾತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ಮನಸುಗಳನ್ನು ಒಡೆಯುವುದು ತಪ್ಪು. ನಾನು ಹಿಂದುತ್ವದ ವಿರೋಧಿಯೇ ಹೊರತು ಹಿಂದೂ ವಿರೋಧಿಯಲ್ಲ ಎಂದವರು ಪ್ರತಿಪಾದಿಸಿದರು.

ರಾಮ, ಆಂಜನೇಯ ಮಂದಿರಗಳು ಪ್ರತೀ ಹಳ್ಳಿಗಳಲ್ಲಿವೆ. ನಾವೂ ಅವುಗಳ ನಿರ್ಮಾಣಕ್ಕೆ ಧನಸಹಾಯ ಮಾಡಿದ್ದೇವೆ. ರಾಮಮಂದಿರ ನಿರ್ಮಾಣವಾದರೆ ಎಲ್ಲರಿಗೂ ಖುಷಿಯೇ. ಆದರೆ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ನಿಲುವಿಗೆ ನನ್ನ ವಿರೋಧವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago