ಬೆಂಗಳೂರು: ನಾನು ಹಿಂದೂ ವಿರೋಧಿಯಲ್ಲ. ಹಿಂದುತ್ವದ ವಿರೋಧಿ. ಧರ್ಮ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ನಮ್ಮ ವಿರೋಧ ಖಂಡಿತಾ ಇಲ್ಲ. ಆದರೆ ಬಿಜೆಪಿಯವರು ಇದೇ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಧರ್ಮ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಸಮಾಜದಲ್ಲಿ ಎಲ್ಲಾ ಧರ್ಮಗಳೂ ಸಮಾನವಾಗಿವೆ. ಒಂದು ಧರ್ಮದ ವಿರುದ್ದ ಇನ್ನೊಂದು ಧರ್ಮವನ್ನು ಎತ್ತಿಕಟ್ಟುವುದು ಸರಿಯಲ್ಲ. ಧರ್ಮ, ಜಾತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ಮನಸುಗಳನ್ನು ಒಡೆಯುವುದು ತಪ್ಪು. ನಾನು ಹಿಂದುತ್ವದ ವಿರೋಧಿಯೇ ಹೊರತು ಹಿಂದೂ ವಿರೋಧಿಯಲ್ಲ ಎಂದವರು ಪ್ರತಿಪಾದಿಸಿದರು.
ರಾಮ, ಆಂಜನೇಯ ಮಂದಿರಗಳು ಪ್ರತೀ ಹಳ್ಳಿಗಳಲ್ಲಿವೆ. ನಾವೂ ಅವುಗಳ ನಿರ್ಮಾಣಕ್ಕೆ ಧನಸಹಾಯ ಮಾಡಿದ್ದೇವೆ. ರಾಮಮಂದಿರ ನಿರ್ಮಾಣವಾದರೆ ಎಲ್ಲರಿಗೂ ಖುಷಿಯೇ. ಆದರೆ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ನಿಲುವಿಗೆ ನನ್ನ ವಿರೋಧವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…