Featured

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ : ಪಕ್ಷ ನಿಷ್ಠೆಯ ಬಗ್ಗೆ ಡಿ.ಕೆ.ಶಿ ಸ್ಪಷ್ಟನೆ – vishwanews24

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು..

ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ..

ಬೆಂಗಳೂರು: “ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು” ಎಂದು ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಚಾರವಾಗಿ ತನ್ನನ್ನು ಟೀಕಿಸುವವರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ತನ್ನ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಾಕಿರುವ ಡಿಕೆಶಿ, “ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ” ಎಂದು ಪಕ್ಷ ನಿಷ್ಠೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

“ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ. ನನಗೂ ವಿರೋಧ ಪಕ್ಷದ ಸಿದ್ಧಾಂತದ ಬಗ್ಗೆ ಅರಿವಿದೆ ಎಂಬುದನ್ನು ಪ್ರಸ್ತಾಪಿಸಿದ್ದೇನೆಯೇ ಹೊರತು ನಾನು ಆರೆಸ್ಸೆಸ್ ಅನ್ನು ಹೊಗಳಲು ಹೇಳಿಲ್ಲ. ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ಯಾರಿಗೇ ಆಗಲಿ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ” ಎಂದು ಹೇಳಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

54 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago