ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ – Vishwanews24
ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ
ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್ಗೆ ಕೇಳ್ತೀನಿ, ಕೆಲವು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ಇವರಿಗೆ ದುಃಖ ಬಂದಿಲ್ಲ ಪಾಪ. ದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.
ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು – Vishwanews24
