Featured

ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’  : ವದಂತಿಗಳಿಗೆ ಕಂಗನಾ ತಿರುಗೇಟು – Vishwanews24

ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’  : ವದಂತಿಗಳಿಗೆ ಕಂಗನಾ ತಿರುಗೇಟು​

ದೆಹಲಿ: ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿದ್ದಾರೆ. ಈ ಹಿಂದೆಯೂ ಅವರು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಚಾರಗಳಿಂದ ಸುದ್ದಿಯಾಗಿತ್ತಿದ್ದರು. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿಯಾಗುತ್ತಿದ್ದಾರೆ. ಕಂಗನಾ ತಮ್ಮ ಎಕ್ಸ್​​​ ಖಾತೆಯಲ್ಲಿ ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್​​ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್​​ನಲ್ಲಿ​​​ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್​ನಲ್ಲೇ ಕಂಗನಾ ತಿರುಗೇಟು ನೀಡಿದ್ದಾರೆ.

ನನ್ನ ವಿರುದ್ಧ ಸಂಪೂರ್ಣ ಆಧಾರರಹಿತ ವದಂತಿಗಳು ಮಾಡಲಾಗುತ್ತಿದೆ. ಅವುಗಳು ‘ನಾಚಿಕೆಗೇಡಿನ’ ವಿಚಾರ ಎಂದು ಹೇಳಿದ್ದಾರೆ. ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪಾಲಿಸುತ್ತಿದ್ದೇನೆ ಹಾಗೂ ಪ್ರಚಾರ ಮಾಡುತ್ತಿದ್ದೇನೆ. ಆದರೆ ಇದೀಗ ನನ್ನ ಮೇಲೆ ಕೆಟ್ಟ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಂದ ನನ್ನ ಇಮೇಜ್​​​ನ್ನು ಹಾಳು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನನ್ನ ಜನರಿಗೆ ನಾನು ‘ಹೆಮ್ಮೆಯ ಹಿಂದೂ’ ಎಂದು ಗೊತ್ತಿದೆ. ನನ್ನ ಮೇಲೆ ಇಂತಹ ಆರೋಪಗಳನ್ನು ಮಾಡಿ ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ, ‘ಜೈ ಶ್ರೀ ರಾಮ್’ ಎಂದು ನಟಿ ಕಂಗನಾ ರಣಾವತ್ ಎಕ್ಸ್​​ನಲ್ಲಿ ಟ್ವೀಟ್​​​ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ಶೈನಾ ಎನ್‌ಸಿ ವಿಜಯ್ ವಾಡೆಟ್ಟಿವಾರ್ ಅವರು ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಅವರು ಕಂಗನಾ ರಣಾವತ್ ಅವರಿಗೆ ಗೋಮಾಂಸ ತಿನ್ನುವ ಕಾರಣಕ್ಕಾಗಿ ಟಿಕೆಟ್ ನೀಡಲಾಗಿದೆ ಎಂದು ಹೇಳುವ ಧೈರ್ಯವಿದೆ. ಕಾಂಗ್ರೆಸ್ ಇಂತಹ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago