ರಾಜ್ಯ ನ್ಯೂಸ್

ನಾನೂ ಲಾಸ್ಟ್​ ಬೆಂಚ್ ಸ್ಟೂಡೆಂಟ್​ ಆಗಿದ್ದೆ: ಎಚ್​ಡಿಎಕೆ

ಬೆಂಗಳೂರು: ಕಾಲೇಜು ದಿನಗಳು ಹುಡುಗಾಟದ ದಿನಗಳು. ಆ ದಿನಗಳು ಮತ್ತೊಮ್ಮೆ ನಮಗೆ ಸಿಗುವುದಿಲ್ಲ. ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಕರು ಪ್ರಶ್ನೆ ಕೇಳುತ್ತಾರೆ ಎಂದು ಲಾಸ್ಟ್​ ಬೆಂಚ್​ನಲ್ಲಿ ಕೂರುತ್ತಿದ್ದೆ ಎಂದು ಮುಖ್ಯಮಂತ್ರಿ ಎಚ್.​ಡಿ ಕುಮಾರಸ್ವಾಮಿ ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಿಸಿದ್ದಾರೆ.

ಜಯನಗರ ನ್ಯಾಷನಲ್​ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಎಚ್​ಡಿಕೆಯನ್ನು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಕಾಲೇಜು ಆಡಳಿತ ಮಂಡಳಿ ಆಹ್ವಾನಿಸಿತ್ತು. ಕಾಲೇಜಿಗೆ ತೆರಳಿದ ಸಿಎಂ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬಳಿ ತಮ್ಮ ಕಾಲೇಜಿನ ದಿನಗಳ ಬಗ್ಗೆ ನೆನೆದು, ಕೆಲ ಸಲಹೆ ನೀಡಿದರು.

ನಮ್ಮ ತಂದೆ ನನಗೆ ಯಾವಾಗಲೂ ನೀನು ಉದ್ಧಾರ ಆಗುವುದಿಲ್ಲ ಎನ್ನುತ್ತಿದ್ದರು. ಆದರೆ, ನಾನು ಗುರಿ ಇಟ್ಟುಕೊಂಡು ಪ್ರಯತ್ನ ಮಾಡಿದ್ದೇನೆ. ಹಾಗೆಯೇ ನೀವೂ ನಿಮ್ಮ ಗುರಿಯೆಡೆಗೆ ನಡೆದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಾನು ಆಗ ದಡ್ಡ ವಿದ್ಯಾರ್ಥಿಯಾಗಿದ್ದೆ
ನಾನು ಆಗ ಅತ್ಯಂತ ದಡ್ಡ ವಿದ್ಯಾರ್ಥಿ ಆಗಿದ್ದೆ. ರಾಜಕುಮಾರ್ ಸಿನಿಮಾ ನೋಡುತ್ತ ಸಿನಿಮಾ ಕ್ಷೇತ್ರಕ್ಕೆ ಹೋಗಿದ್ದೆ. ಅವತ್ತು ನಾನು ಚೆನ್ನಾಗಿ ಓದಿದ್ದರೆ ಇಂದು ನಾನು ಐಎಎಸ್ ಅಧಿಕಾರಿ ಆಗುತ್ತಿದ್ದೆ ಎನಿಸುತ್ತದೆ. ಆಗ ಓದದೇ ಇದ್ದದ್ದೇ ನನಗೆ ಈಗ ಒಳ್ಳೆಯದಾಗಿದೆ. ಆದರೆ, ಈಗ ಎಷ್ಟು ಓದಿದರೂ ಸಾಲದು, ವಿಷಯ ತಿಳಿದುಕೊಳ್ಳಲು ರಾತ್ರಿ 2 ಗಂಟೆ ಆದರೂ ಓದುತ್ತಿರುತ್ತೇನೆ ಎಂದರು.

ನರಸಿಂಹಯ್ಯನವರು ದಾರಿ ದೀಪ
ನ್ಯಾಷನಲ್ ಕಾಲೇಜು ಶಿಕ್ಷಣ ಸಂಸ್ಥೆಯನ್ನು ಬೆಳೆಸಲು ಎಚ್​. ನರಸಿಂಹಯ್ಯ ಅವರ ಕೊಡುಗೆ ಅಪಾರ. ನರಸಿಂಹಯ್ಯನವರ ಸರಳ ಜೀವನ ಎಲ್ಲರಿಗೂ ದಾರಿ ದೀಪ ಎಂದರು.

ರೈತರಿಗೆ ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ
ರೈತರ ಸಾಲಮನ್ನಾ ಮಾಡಿ ಎಂದು ಬಂದ್ ಮಾಡುತ್ತಾರೆ. ನನಗೆ ಉಸಿರಾಡಲೂ ಸಮಯ ನೀಡುತ್ತಿಲ್ಲ. ನನಗೆ ಕಾಂಗ್ರೆಸ್​ ನಾಯಕರ ಸಹಕಾರವೂ ಬೇಕು. ನಾನು ಕಾಂಗ್ರೆಸ್ ಬೆಂಬಲ ಪಡೆದು ಸಿಎಂ ಆಗಿದ್ದೇನೆ. ಆದರೆ, ರೈತರಿಗೆ ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ. ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಸಾಲಮನ್ನಾ ಮಾಡುತ್ತೇನೆ ಎಂದರು.

ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರ ಮಾಡಿಕೊಂಡಿದ್ದಾರೆ. ಡೊನೇಷನ್ ತೆಗೆದುಕೊಳ್ಳದಂತೆ ಕಾನೂನು ತರಲಾಗಿಲ್ಲ. ಬಡವರಿಗೆ ಶಿಕ್ಷಣ ಸಿಗದಂತಾಗಿದೆ. ಸರ್ಕಾರ ಬಡವರಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಬೇಕಿದೆ ಎಂದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

22 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago