Featured

ನಾನೂ ವೋಟ್ ಹಾಕುತ್ತೇನೆಂದು ಹಠ ಹಿಡಿದ 3ರ ಪೋರ- ಕೈಗೆ ಇಂಕ್ ಹಾಕಿಸಿಕೊಂಡು ಖುಷಿಪಟ್ಟ


ಉಡುಪಿ: ಅಪ್ಪ ಅಮ್ಮನ ಜೊತೆ ಹೋಗಿ ನಾನೂ ವೋಟ್ ಹಾಕುತ್ತೇನೆ ಅಂತಾ ನಿಟ್ಟೂರಿನ 3 ವರ್ಷದ ಪೋರ ಹಠ ಹಿಡಿದು, ಕೊನೆಗೆ ಅತ್ತು ಕರೆದು ಕೈಗೆ ಇಂಕ್ ಹಾಕಿಸಿಕೊಂಡಿದ್ದಾನೆ.

ಹಾಲುಗಲ್ಲದ ಹಸುಳೆ ರಿಹಾಂಶ್‍ಗೆ ಈಗ ಮೂರರ ಹರೆಯ. ಇವನು ಉಡುಪಿ ಶಾಸಕ ರಘುಪತಿ ಭಟ್ಟರ ಮಗ. ಅಪ್ಪ ಅಮ್ಮನ ಜೊತೆಗೆ ಮತಗಟ್ಟೆಗೆ ಬಂದ, ಅವರು ಮತದಾನ ಮಾಡಲು ಹೋಗುತ್ತಿದ್ದಂತೆ ನಾನೂ ವೋಟ್ ಹಾಕುತ್ತೇನೆ ಅಂತಾ ಹಠ ಮಾಡಿ, ಅಳಲಾರಂಭಿಸಿದ್ದಾನೆ. ಶಾಸಕರ ಕಾರು ಚಾಲಕ ವಿಜಯ್, ಅಧಿಕಾರಿಗಳ ಬಳಿಗೆ ರಿಹಾಂಶ್‍ನನ್ನು ಕರದೊಯ್ದರು. ಮತಗಟ್ಟೆಯ ಹೊರಗೆ ಕುಳಿತ್ತಿದ್ದ ಅಧಿಕಾರಿಗಳು ಪೆನ್ನಿನಿಂದ ರಿಹಾಂಶ್ ಎಡಗೈ ತೋರ್ಬೆರಳಿಗೆ ಶಾಹಿಮುದ್ರೆ ಹಾಕಿಸಿದ್ದಾರೆ. ಆಗ ಆತನು ಅಳುವುದನ್ನು ನಿಲ್ಲಿಸಿದ್ದಾನೆ.

ಗಮ್ಮತ್ತು ಏನಂದರೆ ಶಾಹಿ ಹಾಕ್ಕೊಂಡು ಬಂದವನೇ ವಿಕ್ಟರಿ ಸಿಂಬಲ್ ತೋರಿಸುತ್ತಾನೆ. ಮೋದಿ ಗೆಲ್ತಾರೆ ಅಂತಾನೆ. ನಾಳೆ ಪೇಪರಲ್ಲಿ ಫೋಟೋ ಹಾಕಿ ಅಂತಾ ಮಾಧ್ಯಮದವರಿಗೆ ಮನವಿ ಮಾಡಿಕೊಂಡಿದ್ದಾನೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ರಘುಪತಿ ಭಟ್, ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಚುನಾವಣೆಯದ್ದೇ ವಾತಾವರಣ. ಹಾಗಾಗಿ ವೋಟ್ ಹಾಕುತ್ತೇನೆ ಅಂತಾ ಹಠ ಮಾಡುತ್ತಿದ್ದ. ಆತ ಕೂಡ ನಮ್ಮಂತೆ ಮೋದಿ ಅಭಿಮಾನಿ ಅಂತಾ ಹೇಳಿದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

33 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

42 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

57 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

1 hour ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago