ಕಾರ್ಕಳ : ತನ್ನ ಮೇಲೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸು ದಾಖಲಾಗದಿದ್ದರೂ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬಿಜೆಪಿ ಪದಾಧಿಕಾರಿಗಳು ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹ ಪೋಸ್ಟ್ ಹಾಕಿದ ಕೆಲಸ ಮಾಡಿದ್ದರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಸಿದ್ದನಿದ್ದೇನೆ. ಆದರೆ ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣಿಸಲು ಸಿದ್ದರಿದ್ದಾರೆಯೇ ಎಂದು ಸವಾಲೆಸೆದರು
ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭ ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ. ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ರಾಧಾಕೃಷ್ಣ ನಾಯಕ್ ಅವರಿಗೆ ಕಾರ್ಕಳ ಟೌನ್ ಎಸ್ ಐ ಮಧು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…