ವಿಜಯಪುರ: ಸಿಎಂ ಯಡಿಯೂರಪ್ಪ ಅವರು ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಬೇಕು ಎಂದು ಅವರು ಮಂಗಳವಾರ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವೀರಶೈವ ಸಮಾಜ ಯಡಿಯೂರಪ್ಪ ಉಳಿಸಿದ್ದಾರೆ ಅನ್ನೋ ಶಾಮನೂರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ನಾವು ವೀರಶೈವ ಧರ್ಮದಲ್ಲಿ ಕೈ ಹಾಕಿಲ್ಲ, ನಮ್ಮದು ಲಿಂಗಾಯತ ಧರ್ಮ, ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ ಇದರಲ್ಲಿ ಎರಡು ಮಾತಿಲ್ಲ, ಜೈನ್ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು ಲಿಂಗಾಯತ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.
ಅಲ್ಲದೇ ನೇರೆ ಪರಿಹಾರ ವಿಚಾರದಲ್ಲಿ ಕೇಂದ್ರದ ಮಲತಾಯಿ ದೋರಣೆ ನಡೆಯುತ್ತಿದೆ. ನಾನೇನಾದ್ರು ಬಿಎಸ್ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ. ಯಡಿಯೂರಪ್ಪಗೆ ಉತ್ತರ ಕರ್ನಾಟಕ ಕೈ ಹಿಡಿದಿದೆ. ಆದರೆ, ಇದೀಗ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ನುಡಿದರು.
ಅಲ್ಲದೇ ಈಶ್ವರಪ್ಪ, ತೇಜಸ್ವಿ ಸೂರ್ಯ ಪ್ರವಾಹದಲ್ಲಿ ಸಿಲುಕಲಿ. ಆಗ ಅವರಿಗೆ ಪ್ರವಾಹದ ಬಗ್ಗೆ ತಿಳಿಯುತ್ತೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಕೈಗೊಂಡಿಲ್ಲ, ಸ್ಥಳಾಂತರ ಮಾಡುವ ವಿಚಾರದಲ್ಲಿ ಯಾವುದೇ ಕಾರ್ಯ ಮಾಡಿಲ್ಲ, ಉತ್ತರ ಕರ್ನಾಟಕದ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ, ನಾನು ಸ್ವತಃ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀರಿಕ್ಷಿತ ಮಟ್ಟದಲ್ಲಿ ಸಹಾಯ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಅವರು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…