Featured

ನಾನೇನಾದ್ರು ಬಿಎಸ್​ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ : ಎಂ.ಬಿ ಪಾಟೀಲ್ -Vishwanews24

ವಿಜಯಪುರ: ಸಿಎಂ ಯಡಿಯೂರಪ್ಪ ಅವರು ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಬೇಕು ಎಂದು ಅವರು ಮಂಗಳವಾರ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವೀರಶೈವ ಸಮಾಜ ಯಡಿಯೂರಪ್ಪ ಉಳಿಸಿದ್ದಾರೆ ಅನ್ನೋ ಶಾಮನೂರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ನಾವು ವೀರಶೈವ ಧರ್ಮದಲ್ಲಿ ಕೈ ಹಾಕಿಲ್ಲ, ನಮ್ಮದು ಲಿಂಗಾಯತ ಧರ್ಮ, ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ ಇದರಲ್ಲಿ ಎರಡು ಮಾತಿಲ್ಲ, ಜೈನ್ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು ಲಿಂಗಾಯತ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.

ಅಲ್ಲದೇ ನೇರೆ ಪರಿಹಾರ ವಿಚಾರದಲ್ಲಿ ಕೇಂದ್ರದ ಮಲತಾಯಿ ದೋರಣೆ ನಡೆಯುತ್ತಿದೆ. ನಾನೇನಾದ್ರು ಬಿಎಸ್​ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ. ಯಡಿಯೂರಪ್ಪಗೆ ಉತ್ತರ ಕರ್ನಾಟಕ ಕೈ ಹಿಡಿದಿದೆ. ಆದರೆ, ಇದೀಗ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ನುಡಿದರು.

ಅಲ್ಲದೇ ಈಶ್ವರಪ್ಪ, ತೇಜಸ್ವಿ ಸೂರ್ಯ ಪ್ರವಾಹದಲ್ಲಿ ಸಿಲುಕಲಿ. ಆಗ ಅವರಿಗೆ ಪ್ರವಾಹದ ಬಗ್ಗೆ ತಿಳಿಯುತ್ತೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಕೈಗೊಂಡಿಲ್ಲ, ಸ್ಥಳಾಂತರ ಮಾಡುವ ವಿಚಾರದಲ್ಲಿ ಯಾವುದೇ ಕಾರ್ಯ ಮಾಡಿಲ್ಲ, ಉತ್ತರ ಕರ್ನಾಟಕದ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ, ನಾನು ಸ್ವತಃ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀರಿಕ್ಷಿತ ಮಟ್ಟದಲ್ಲಿ ಸಹಾಯ ಮಾಡಿಲ್ಲ ಎಂದು ಕಾಂಗ್ರೆಸ್​ ಮುಖಂಡ ಎಂ.ಬಿ ಪಾಟೀಲ್ ಅವರು ಹೇಳಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago