Featured

ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ : ಮಿಥುನ್ ರೈ – Vishwanews24

ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹಿಂದೆ ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ..

ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲ..

ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ : ಮಿಥುನ್ ರೈ

ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್‌ ನಾಯಕ ಮಿಥುನ್‌ ರೈ ಸ್ಪಷ್ಟನೆ ನೀಡಿದ್ದು, ಈ ವಿಚಾರ ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ ಎಂದಿದ್ದಾರೆ.

ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್‌ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು. ಇದು ಆಕ್ರೋಶಕ್ಕೆ ಕಾರಣವಾದಾಗ ಮಿಥುನ್‌ ರೈ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಇದೀಗ ಉಡುಪಿ ಶಾಸಕ ಕೆ. ರಘುಪತಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಳಿಕ ಮತ್ತೊಮ್ಮೆ ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, ನಾನೇನೂ ಇತಿಹಾಸಕಾರನಲ್ಲ. ಪೂಜ್ಯರಾದ ಪೇಜಾವರ ಹಿರಿಯ ಶ್ರೀಗಳು ಹೇಳಿದ ವಿಚಾರವನ್ನು ಪತ್ರಿಕೆಯಲ್ಲಿ ಓದಿದ್ದೆ. ಅದನ್ನೇ ಹೇಳಿದ್ದೆನೆ ಎಂದಿದ್ದಾರೆ.

ಅವತ್ತು ನಾನು ಈ ಮಾತುಗಳನ್ನು ಹೇಳುವಾಗ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಕೂಡ ವೇದಿಕೆಯಲ್ಲಿದ್ದರು. ದೇವಸ್ಥಾನದ ಅರ್ಚಕರೂ ಇದ್ದರು. ನನಗೆ ಈ ಮಾತು ಹೇಳುವಲ್ಲಿ ಬೇರೆ ಯಾವ ಉದ್ದೇಶವೂ ಇರಲಿಲ್ಲ. ನಮ್ಮ ಜಿಲ್ಲೆಯ ಸೌಹಾರ್ದ ಪರಂಪರೆ ತುಂಬ ಪುರಾತನವಾದುದು. ಸೌಹಾರ್ದತೆಗೆ ನಾನೂ ನೂರಾರು ಉದಾಹರಣೆಗಳನ್ನು ಕೊಡಬಲ್ಲೆ. ಅದರಲ್ಲಿ ಇದೊಂದು ಎಂದು ಹೇಳಿ ಪೇಜಾವರ ಶ್ರೀಗಳು ಹೇಳಿದ ಮಾತನ್ನು ಪುನರುಚ್ಚರಿಸಿದ್ದೆ ಎಂದು ಮಿಥುನ್‌ ರೈ ಹೇಳಿದ್ದಾರೆ.

ʻʻನಾನು ಉಡುಪಿ ಮಠದ ಪೇಜಾವರ ಶ್ರೀಗಳು ಈ ಹಿಂದೆ ಹೇಳಿದ್ದನ್ನೆ ಪುನರುಚ್ಚರಿಸಿದ್ದೇನೆ. ಅವರು ಹೇಳಿದ ಮಾತನ್ನೇ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಅದನ್ನೇ ನಾನು ಉಲ್ಲೇಖಿಸಿದ್ದೇನೆ. ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲʼʼ ಎಂದಿರುವ ಅವರು, ತಪ್ಪಾಗಿದ್ರೆ ನಾನು ಕ್ಷಮಾಪಣೆ ಬೇಕಾದರೂ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

16 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

16 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago