Featured

ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ : ಮಿಥುನ್ ರೈ – Vishwanews24

ನಾನೇನು ಇತಿಹಾಸಕಾರನಲ್ಲ; ಪೇಜಾವರ ಶ್ರೀಗಳು ಹಿಂದೆ ಹೇಳಿದ್ದನ್ನು ಪುನರುಚ್ಚರಿಸಿದ್ದೇನೆ..

ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲ..

ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ : ಮಿಥುನ್ ರೈ

ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್‌ ನಾಯಕ ಮಿಥುನ್‌ ರೈ ಸ್ಪಷ್ಟನೆ ನೀಡಿದ್ದು, ಈ ವಿಚಾರ ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ ಎಂದಿದ್ದಾರೆ.

ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್‌ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು. ಇದು ಆಕ್ರೋಶಕ್ಕೆ ಕಾರಣವಾದಾಗ ಮಿಥುನ್‌ ರೈ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಇದೀಗ ಉಡುಪಿ ಶಾಸಕ ಕೆ. ರಘುಪತಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಳಿಕ ಮತ್ತೊಮ್ಮೆ ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, ನಾನೇನೂ ಇತಿಹಾಸಕಾರನಲ್ಲ. ಪೂಜ್ಯರಾದ ಪೇಜಾವರ ಹಿರಿಯ ಶ್ರೀಗಳು ಹೇಳಿದ ವಿಚಾರವನ್ನು ಪತ್ರಿಕೆಯಲ್ಲಿ ಓದಿದ್ದೆ. ಅದನ್ನೇ ಹೇಳಿದ್ದೆನೆ ಎಂದಿದ್ದಾರೆ.

ಅವತ್ತು ನಾನು ಈ ಮಾತುಗಳನ್ನು ಹೇಳುವಾಗ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಕೂಡ ವೇದಿಕೆಯಲ್ಲಿದ್ದರು. ದೇವಸ್ಥಾನದ ಅರ್ಚಕರೂ ಇದ್ದರು. ನನಗೆ ಈ ಮಾತು ಹೇಳುವಲ್ಲಿ ಬೇರೆ ಯಾವ ಉದ್ದೇಶವೂ ಇರಲಿಲ್ಲ. ನಮ್ಮ ಜಿಲ್ಲೆಯ ಸೌಹಾರ್ದ ಪರಂಪರೆ ತುಂಬ ಪುರಾತನವಾದುದು. ಸೌಹಾರ್ದತೆಗೆ ನಾನೂ ನೂರಾರು ಉದಾಹರಣೆಗಳನ್ನು ಕೊಡಬಲ್ಲೆ. ಅದರಲ್ಲಿ ಇದೊಂದು ಎಂದು ಹೇಳಿ ಪೇಜಾವರ ಶ್ರೀಗಳು ಹೇಳಿದ ಮಾತನ್ನು ಪುನರುಚ್ಚರಿಸಿದ್ದೆ ಎಂದು ಮಿಥುನ್‌ ರೈ ಹೇಳಿದ್ದಾರೆ.

ʻʻನಾನು ಉಡುಪಿ ಮಠದ ಪೇಜಾವರ ಶ್ರೀಗಳು ಈ ಹಿಂದೆ ಹೇಳಿದ್ದನ್ನೆ ಪುನರುಚ್ಚರಿಸಿದ್ದೇನೆ. ಅವರು ಹೇಳಿದ ಮಾತನ್ನೇ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಅದನ್ನೇ ನಾನು ಉಲ್ಲೇಖಿಸಿದ್ದೇನೆ. ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲʼʼ ಎಂದಿರುವ ಅವರು, ತಪ್ಪಾಗಿದ್ರೆ ನಾನು ಕ್ಷಮಾಪಣೆ ಬೇಕಾದರೂ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

15 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

16 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

2 days ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

2 days ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

2 days ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

2 days ago