ಮಂಗಳೂರು: ‘ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಘೋಷಣೆಯಲ್ಲಿ ಬಿಜೆಪಿಯಿಂದ ಕರಾವಳಿಗೆ ಆದ ಭೌಗೋಳಿಕ ಅನ್ಯಾಯ, ಆಯ್ಕೆಯ ಮಾನದಂಡದಲ್ಲಾದ ವ್ಯತ್ಯಾಸದ ಕಾರಣಕ್ಕಾಗಿ ನಾನು ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಯಾರನ್ನೂ ಸೋಲಿಸುವ ಉದ್ದೇಶ ನನ್ನಲ್ಲಿಲ್ಲ, ಬದಲಾಗಿ ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯನಾಗಿ ಆಯ್ಕೆಯಾದರೆ ಪದವೀಧರ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಪೂರ್ತಿ ಸಮಯ ನೀಡಿ, ಆ ಸ್ಥಾನಕ್ಕೆ ನ್ಯಾಯ ನೀಡುವ ಕೆಲಸ ಮಾಡುತ್ತೇನೆ. ನಾನೇನು ಪಕ್ಷಕ್ಕೆ ದ್ರೋಹ ಮಾಡಿಲ್ಲ. ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ’ ಎಂದರು.
‘ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವಾಗ ಬೂತ್ ಮಟ್ಟದಿಂದಲೇ ಹೆಸರು ಪಡೆದು, ಮಂಡಲದಲ್ಲಿ ಚರ್ಚೆಯಾಗಿ ಅಂತಿಮವಾಗಿ ಜಿಲ್ಲೆಯಿಂದ ಒಂದು ಹೆಸರು ಅಂತಿಮವಾಗಿ ರಾಜ್ಯದ ಮೂಲಕ ಕೇಂದ್ರಕ್ಕೆ ಕಳುಹಿಸಲಾಗುತ್ತಿತ್ತು. ಆದರೆ, ಈಗ ರಾಜ್ಯದಿಂದ ಹೋದ ಹೆಸರು ಕೇಂದ್ರದಲ್ಲಿ ಬದಲಾಗುತ್ತದೆ. ಈಗ ಕಾಂಗ್ರೆಸ್ನ ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ’ ಎಂದು ಆಕ್ರೋಶ ಹೊರ ಹಾಕಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…