Featured

ನಾನೇನೂ ತಪ್ಪು ಮಾಡಿಲ್ಲ ಎನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ : ಡಿಕೆ ಶಿವಕುಮಾರ್ – Vishwanews24

ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ

ಚಾರ್ಜ್ ಶೀಟ್‌ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ

ಸತ್ಯ, ಧರ್ಮ, ಕಾನೂನು ಇರುವ ದೇಶದಲ್ಲಿ ಇದನ್ನೆಲ್ಲಾ ಎದುರಿಸುತ್ತೇನೆ..

ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. ಒಂದೋ ಅವರೊಂದಿಗೆ ಹೋಗಬೇಕು ಇಲ್ಲವೇ ಅವರಿಗೆ ಶರಣಾಗಬೇಕು. ಚಾರ್ಜ್ ಶೀಟ್‌ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು ನ್ಯಾಯ, ನೀತಿ, ಸತ್ಯ, ಧರ್ಮ, ಕಾನೂನು ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಇದನ್ನು ಎದುರಿಸುತ್ತೇನೆ ಎಂದರು.

ಚಾರ್ಜ್ ಶೀಟ್ ಫೈಲ್ ಮಾಡಿರುವ ಬಗ್ಗೆ ನನಗೆ ಮಾಧ್ಯಮದಿಂದ ತಿಳಿಯಿತು. ನನಗೆ ಅದರ ಕಾಪಿ ಇನ್ನೂ ಸಿಕ್ಕಿಲ್ಲ. ಸಾಮಾನ್ಯವಾಗಿ 6 ತಿಂಗಳಲ್ಲಿ ಚಾರ್ಜ್ ಶೀಟ್ ಫೈಲ್ ಮಾಡುತ್ತಾರೆ. ನನ್ನ ಮೇಲೆ ಬಹಳ ದೊಡ್ಡ ತನಿಖೆ ನಡೆದಿದೆ. ಆದರೆ ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ನನಗೆ ಅದರ ಕಾಪಿ ಬರಲಿ. ಸತ್ಯ, ಧರ್ಮ, ಕಾನೂನು ಇರುವ ದೇಶದಲ್ಲಿ ಇದನ್ನೆಲ್ಲಾ ಎದುರಿಸುತ್ತೇನೆ ಎಂದರು.

ನಾನೇನೂ ತಪ್ಪು ಮಾಡಿಲ್ಲ ಎನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ. ಆದರೆ ಬಿಜೆಪಿಯವರು ನನ್ನ ಮೇಲೆ ರಾಜಕೀಯದ ಎಲ್ಲಾ ಅಸ್ತ್ರಗಳನ್ನೂ ಉಪಯೋಗಿಸುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago