ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್ – Vishwanews24

Featured, ರಾಜ್ಯ ನ್ಯೂಸ್

ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್

ಬೆಂಗಳೂರು: ಬೇರೆಯವರು ಗುಂಡು ಹೊಡೆಯುವುದು ಬೇಡ. ಗುಂಡು ಹೊಡೆಯುವುದಾದರೆ ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ಗುಂಡು ಹೊಡೆಯಲಿ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿಯವರನ್ನ ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರವಾಗಿ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಪಕ್ಷದಲ್ಲಿ ಅವರನ್ನ ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಈಗ ಗಮನ ಸೆಳೆಯಲು ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾರ್ಕಳ: ಫೆ. 11ರಂದು ಅತ್ತೂರು ಪರ್ಪಲೆ ಗಿರಿ ಧರ್ಮ ದೈವಗಳ ಶಿಲಾಮಯ ಗುಡಿಗಳ ಶಿಲಾನ್ಯಾಸ – Vishwanews24

ಇದೇ ವೇಳೆ ನಾನು ಡಿ.ಕೆ.ಸುರೇಶ್ ಗೆ ಗುಂಡು ಹೊಡೆಯಿರಿ ಅಂತ ಹೇಳಿಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕನ್ನಡ, ಕರ್ನಾಟಕದ ಪರ ಧ್ವನಿ ಎತ್ತಿದ್ದಕ್ಕೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿದ್ದಾರೆ ಎಂಬ ವರದಿ ಬರುತ್ತಿದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ ಅನಿಸತ್ತೆ. ಅದಕ್ಕೆ ಆಗಾಗ ಏನೇನೋ ಮಾತಾಡ್ತಿದ್ದೀರಿ. ಬೇರೆಯವರು ಯಾಕೆ ಗುಂಡಿಟ್ಟು‌ ಕೊಲ್ಲಬೇಕು, ದಯವಿಟ್ಟು ನೀವೇ ಆ ಆಸೆಯನ್ನು ಈಡೇರಿಸಿಕೊಳ್ಳಿ ಎಂದರು.

ನಿಮ್ಮ ನಾಯಕರಿಂದ ನೀವೇ ಶಬ್ಬಾಷ್ ಗಿರಿ ತೆಗೆದುಕೊಳ್ಳಿ. ನಾನೇ ಸಮಯ ಕೊಡ್ತೀನಿ ಒಂದು ವಾರದಲ್ಲಿ ಯಾವಾಗ ಅಂತ ಹೇಳ್ತೀನಿ. ನಾನೇ ಅವರ ಮನೆಗೆ ಹೋಗ್ತೀನಿ. ಅವರೇ ಗುಂಡು ಹೊಡೆಯಲಿ. ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ ಅವರೇ ಗುಂಡು ಹೊಡೆಯಲಿ. ಬಡವರ ಮಕ್ಕಳನ್ನ ಹೇಳಿಕೆ ಮೂಲಕ ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ. ಅಲ್ಲಿ ಇಲ್ಲಿ ಯಾಕೆ ಹುಡುಕುತ್ತೀರಾ..?, ನಾನೇ ನಿಮ್ಮ ಮನೆಗೆ ಬರುತ್ತೇನೆ. ಒಂದು ವಾರದಲ್ಲಿ ಸಮಯ ನಿಗದಿ ಮಾಡ್ತೀನಿ, ನಿಮ್ಮ ಭೇಟಿ ಮಾಡ್ತೀನಿ. ಸಿದ್ಧರಾಗಿ ಗುಂಡುಕ್ತೀರಾ, ಕೊಲ್ತೀರಾ ನೋಡೋಣ ಎಂದು ಡಿಕೆ ಸುರೇಶ್‌ ಸವಾಲೆಸೆದಿದ್ದಾರೆ.

ಚುನಾವಣೆಗೆ  ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್‌ ಶಾ – Vishwanews24

Leave a Reply