Featured

ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್ – Vishwanews24

ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್

ಬೆಂಗಳೂರು: ಬೇರೆಯವರು ಗುಂಡು ಹೊಡೆಯುವುದು ಬೇಡ. ಗುಂಡು ಹೊಡೆಯುವುದಾದರೆ ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ಗುಂಡು ಹೊಡೆಯಲಿ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿಯವರನ್ನ ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರವಾಗಿ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಪಕ್ಷದಲ್ಲಿ ಅವರನ್ನ ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಈಗ ಗಮನ ಸೆಳೆಯಲು ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ನಾನು ಡಿ.ಕೆ.ಸುರೇಶ್ ಗೆ ಗುಂಡು ಹೊಡೆಯಿರಿ ಅಂತ ಹೇಳಿಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕನ್ನಡ, ಕರ್ನಾಟಕದ ಪರ ಧ್ವನಿ ಎತ್ತಿದ್ದಕ್ಕೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿದ್ದಾರೆ ಎಂಬ ವರದಿ ಬರುತ್ತಿದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ ಅನಿಸತ್ತೆ. ಅದಕ್ಕೆ ಆಗಾಗ ಏನೇನೋ ಮಾತಾಡ್ತಿದ್ದೀರಿ. ಬೇರೆಯವರು ಯಾಕೆ ಗುಂಡಿಟ್ಟು‌ ಕೊಲ್ಲಬೇಕು, ದಯವಿಟ್ಟು ನೀವೇ ಆ ಆಸೆಯನ್ನು ಈಡೇರಿಸಿಕೊಳ್ಳಿ ಎಂದರು.

ನಿಮ್ಮ ನಾಯಕರಿಂದ ನೀವೇ ಶಬ್ಬಾಷ್ ಗಿರಿ ತೆಗೆದುಕೊಳ್ಳಿ. ನಾನೇ ಸಮಯ ಕೊಡ್ತೀನಿ ಒಂದು ವಾರದಲ್ಲಿ ಯಾವಾಗ ಅಂತ ಹೇಳ್ತೀನಿ. ನಾನೇ ಅವರ ಮನೆಗೆ ಹೋಗ್ತೀನಿ. ಅವರೇ ಗುಂಡು ಹೊಡೆಯಲಿ. ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ ಅವರೇ ಗುಂಡು ಹೊಡೆಯಲಿ. ಬಡವರ ಮಕ್ಕಳನ್ನ ಹೇಳಿಕೆ ಮೂಲಕ ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ. ಅಲ್ಲಿ ಇಲ್ಲಿ ಯಾಕೆ ಹುಡುಕುತ್ತೀರಾ..?, ನಾನೇ ನಿಮ್ಮ ಮನೆಗೆ ಬರುತ್ತೇನೆ. ಒಂದು ವಾರದಲ್ಲಿ ಸಮಯ ನಿಗದಿ ಮಾಡ್ತೀನಿ, ನಿಮ್ಮ ಭೇಟಿ ಮಾಡ್ತೀನಿ. ಸಿದ್ಧರಾಗಿ ಗುಂಡುಕ್ತೀರಾ, ಕೊಲ್ತೀರಾ ನೋಡೋಣ ಎಂದು ಡಿಕೆ ಸುರೇಶ್‌ ಸವಾಲೆಸೆದಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago