Featured

ನಾನೇ ಪ್ರಾದೇಶಿಕ ಪಕ್ಷ ಮಾಡಿ ; 2028ಕ್ಕೆ ನಾನೇ ಮುಖ್ಯಮಂತ್ರಿ : ಯತ್ನಾಳ್ – vishwanews24

ನಾನೇ ಪ್ರಾದೇಶಿಕ ಪಕ್ಷ ಮಾಡಿ ; 2028ಕ್ಕೆ ನಾನೇ ಮುಖ್ಯಮಂತ್ರಿ

ನವದೆಹಲಿ: ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಬಿಜೆಪಿ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಲು ನಾನು ದೆಹಲಿಗೆ ಬಂದಿಲ್ಲ. ಯಾರ ಕಾಲಿಗೆ ಬಿದ್ದು ಪಕ್ಷ ಸೇರಿಸಿಕೊಳ್ಳಿ ಅಂತಾ ಕೇಳಲ್ಲ. ನಾನೇ ಪ್ರಾದೇಶಿಕ ಪಕ್ಷ ಮಾಡ್ತೀನಿ, 2028ಕ್ಕೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ನಾನೇ ಮುಖ್ಯಮಂತ್ರಿ ಆಗ್ತಿನಿ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ, ಯಾರೇ ಏನೇ ಸರ್ವೇ ಮಾಡಿದ್ರು ಅಧಿಕಾರಕ್ಕೆ ಬರಲಿದೆ. ಜೆಸಿಬಿ ಆಗುತ್ತೋ? ಏನಾಗುತ್ತೋ? ನೋಡೋಣ ನಮ್ಮ ಪಕ್ಷನೇ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಇದನ್ನೂ ಓದಿ: 

ರಾಜ್ಯದಲ್ಲಿ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲ್ಲ. ವಿಜಯೇಂದ್ರ, ಯಡಿಯೂರಪ್ಪ, ರಾಘವೇಂದ್ರರ ಕುಟುಂಬ ಇರುವವರೆಗೂ ನಾನು ಪಕ್ಷ ಸೇರಲ್ಲ. ನಾನು ಹೋಗಿ ಕೈ, ಕಾಲು ಹಿಡಿದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತಾ ಹೇಳುವ ಅವಶ್ಯಕತೆ ಇಲ್ಲ. ನಾವು ಸ್ವಾಭಿಮಾನದಿಂದ ಬದುಕಿರುವವರು. ಭ್ರಷ್ಟ ಕುಟುಂಬದ ನೇತೃತ್ವ ನಾವು ಒಪ್ಪಲ್ಲ. ಭ್ರಷ್ಟ ಕುಟುಂಬ ಎಲ್ಲಿವರೆಗೆ ಇರುತ್ತೋ ಅಲ್ಲಿವರೆಗೂ ಬಿಜೆಪಿ ಸೇರುವ ಪ್ರಶ್ನೆ ಉದ್ಭವಿಸಲ್ಲ. ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಯಾರ ಬಳಿಯೂ ಹೋಗಲ್ಲ. ನಾನು ಅಷ್ಟರಲ್ಲಿ ಪ್ರಾದೇಶಿಕ ಪಕ್ಷ ಮಾಡ್ತಿನಿ ಕಾದು ಕೂರಲು ಹುಚ್ಚನಲ್ಲ ಎಂದು ತಿಳಿಸಿದ್ದಾರೆ.

ಸದ್ಯ ಮಗನ ಮದುವೆ ನಿಮಿತ್ತ ದೆಹಲಿಗೆ ಬಂದಿದ್ದೇನೆ. ಕೆಲವು ಹಳೆಯ ಸ್ನೇಹಿತರ ಭೇಟಿಗೆ ಬಂದಿದ್ದೇನೆ. ಯಾವ ಬಿಜೆಪಿ ನಾಯಕರನ್ನು ಭೇಟಿ ಮಾಡಲ್ಲ, ಪಕ್ಷದ ಸೇರುವ ಬಗ್ಗೆ ಚರ್ಚೆ ಮಾಡಲ್ಲ ಎಂದಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago