ಮೈಸೂರು: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಧಿಕಾರ ಹಂಚಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಮಗೆ ಯಾಕೆ ಅನುಮಾನ? ಯಾಕೆ ಮತ್ತೆ ಮತ್ತೆ ಅದನ್ನ ಕೇಳುತ್ತೀರಾ? ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ? ನಾಯಕತ್ವ ಬದಲಾವಣೆ ಸಂಪುಟ ಪುನಾರಚನೆ ಎಲ್ಲದನ್ನ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದರು ಮಾತನಾಡಿದ್ಯಾ? ಇಲ್ಲ ತಾನೇ, ಹಾಗಾದ್ರೆ ಮತೆ ಯಾಕೆ ಆ ಪ್ರಶ್ನೆ. ಹೈಕಮಾಂಡ್ ಹೇಳುವುದನ್ನ ನಾನು, ಶಾಸಕರು ಪಾಲಿಸಬೇಕು” ಎಂದರು.
“ದೆಹಲಿಗೆ ಹೋಗಿರುವ ಚೆಲುವರಾಯಸ್ವಾಮಿ ಜೊತೆ ನಾನೇ ಮಾತಾಡಿದ್ದೇನೆ. ಇಲಾಖೆ ಕೆಲಸದ ಹಿನ್ನೆಲೆಯಲ್ಲಿ ಹೋಗಿದ್ದೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ಶಾಸಕರು, ಸಚಿವರು ದೆಹಲಿಗೆ ಹೋಗಬಾರದಾ? ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮತ್ತೆ ನಾನು ಯಾಕೆ ಈ ಬಗ್ಗೆ ವಿವರಣೆ ಕೊಡಲಿ. ನಾಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡ್ತೀನಿ” ಎಂದು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…