ನಾನೊಬ್ಬ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ , ರಾಜಕೀಯ ಶಾಶ್ವತವಲ್ಲ : ಡಿಕೆ ಶಿ – Vishwnaews24
ನಾನೊಬ್ಬ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ , ರಾಜಕೀಯ ಶಾಶ್ವತವಲ್ಲ : ಡಿಕೆ ಶಿ – Vishwnaews24
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ಇನ್ನೆರಡು ದಿನ ಬಾಕಿ ಇದೆ. ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಮೂರು ರಾಜಕೀಯ ಪಕ್ಷಗಳ ನಾಯಕರು ತಂತ್ರ-ಪ್ರತಿತಂತ್ರ ನಡೆಸುತ್ತಿದ್ದಾರೆ.
ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರ, ರಾಜ್ಯಸಭೆ ಚುನಾವಣೆಯ ನಿರ್ಧಾರ ನನ್ನೊಬ್ಬನದ್ದಲ್ಲ. ನಾನೊಬ್ಬನೇ ಏನೂ ನಿರ್ಧರ ಮಾಡಲು ಸಾಧ್ಯವಿಲ್ಲ. ಪಾಲಿಟಿಕ್ಸ್ ಇಸ್ ಆರ್ಟ್ ಆಫ್ ಪಾಸಿಬಲಿಟಿ ಎಂಬುದಾಗಿ ಹೇಳಿದರು.

ರಾಜಕೀಯ ಶಾಶ್ವತವಲ್ಲ ಎಂಬುದನ್ನು ನಾನು ಒಪ್ಪುತ್ತೇನೆ. ನಾನೊಬ್ಬ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಹೀಗಾಗಿ ನಾಯಕರ ಜೊತೆಗೆ ಸ್ವತಂತ್ರವಾಗಿ ಮಾತನಾಡಬಹುದು. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಯ ಬಗ್ಗೆ ನಾನೊಬ್ಬನೇ ಏನೂ ಮಾತನಾಡಲು ಸಾಧಅಯವಿಲ್ಲ ಎಂಬುದಾಗಿ ತಿಳಿಸಿದರು.
