Featured

ಮಲ್ಪೆ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಅವಶೇಷಗಳು ಪತ್ತೆ -Vishwanews24

ಉಡುಪಿ: ಕಳೆದ 4.5 ತಿಂಗಳಿನಿಂದ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಭಗ್ನಾವಶೇಷಗಳು ಪತ್ತೆಯಾಗಿದ್ದು ಇದನ್ನು ಇಂಡಿಯನ್ ನೇವಿ ಖಾತ್ರಿ ಪಡಿಸಿದೆ. ಮಹಾರಾಷ್ಟ್ರದ ಮಾಲ್ವನ್ ಕರಾವಳಿ ತೀರದಲ್ಲಿ ಇದು ಪತ್ತೆಯಾಗಿರುವ ಬಗ್ಗೆ ಇಂಡಿಯನ್ ನೇವಿ ತಿಳಿಸಿದ್ದು, ಏಳು ಮಂದಿ ಮೀನುಗಾರರು ಸಾವನ್ನಪ್ಪಿರುವ ಸಾಧ್ಯತೆಯಿದೆ.

ಮೀನುಗಾರರ ಪತ್ತೆ ಕಾರ್ಯಕ್ಕೆ ಶಾಸಕರಾದ ಕೆ ರಘುಪತಿ ಭಟ್ ಅವರು ನಿರಂತರ ಶ್ರಮಿಸುತ್ತಲೇ ಇದ್ದು, ಕಳೆದ ನಾಲ್ಕು ದಿನಗಳ ಹಿಂದೆ ಸ್ವತಃ ತಾವೇ ನೌಕಾದಳದ ಅಧಿಕಾರಿಗಳ ಜೊತೆ ಹಡಗಿನಲ್ಲಿ ಪತ್ತೆ ಕಾರ್ಯಕ್ಕೆ ತೆರಳಿದ್ದರು.

ಇದೀಗ ಮಹಾರಾಷ್ಟ್ರದ ಮಾಲ್ವಾನ್ ಎಂಬ ಪ್ರದೇಶದಲ್ಲಿ ನಾಪತ್ತೆಯಾದ ಮೀನುಗಾರರ ಬೋಟ್ ಪತ್ತೆಯಾಗಿದ್ದು, ಸ್ವತಃ ನೌಕಾದಳದ ಅಧಿಕಾರಿಗಳೇ ಖಚಿತ ಪಡಿಸಿದ್ದಾರೆ. 9 ಜನ ಮೀನುಗಾರರು ಮತ್ತು ಶಾಸಕ ರಘುಪತಿ ಭಟ್ ಅವರು ನೌಕಾಪಡೆಯ ವಿಶೇಷ ಹಡಗಿನಲ್ಲಿ ಕಾರ್ಯಾಚರಣೆಗೆ ತೆರಳಿದ್ದು ಇದೀಗ 64 ಮೀಟರ್ ಆಳದಲ್ಲಿ ಹಡಗಿನ ಅವಶೇಷಗಳು ಪತ್ತೆಯಾಗಿದೆ. ಇದನ್ನು ಸ್ವತಃ ನೌಕಾದಳದ ಅಧಿಕಾರಿಗಳು ಫೋಟೋ ಚಿತ್ರೀಕರಣ ಮಾಡಿದ್ದು ಪತ್ತೆಯಾದ ಅವಶೇಷಗಳು ಸುವರ್ಣ ತ್ರಿಭುಜ ಹಡಗಿನದ್ದೇ ಎಂದು ಧೃಢಪಡಿಸಿದ್ದಾರೆ.

ಡಿಸೆಂಬರ್ 13, 2018 ರಂದು ಸುವರ್ಣ ತ್ರಿಭುಜ ಬೋಟ್ ಏಳು ಜನ ಮೀನುಗಾರರನ್ನು ಹೊತ್ತು ಮೀನುಗಾರಿಕೆ ತೆರಳಿ ನಾಪತ್ತೆಯಾಗಿತ್ತು. ನಂತರ ಅವರ ಹುಡುಕಾಟಕ್ಕೆ ಪೊಲೀಸರು, ಇಂಡಿಯನ್ ನೇವಿ, ಕರಾವಳಿ ಕಾವಲು ಪಡೆ ಸೇರಿದಂತೆ ಮೀನುಗಾರರು ಪಯತ್ನ ನಡೆಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago