Featured

ನಾಮಾವಶೇಷಗೊಂಡ ಐತಿಹಾಸಿಕ ಮಲ್ಲಾರು ಕೋಟೆ, ನಂದಿಕೆರೆಯನ್ನಾದರೂ ಉಳಿಸುವಿರಾ ?~ ಶ್ರೀರಾಮ ದಿವಾಣ

ನಾಮಾವಶೇಷಗೊಂಡ ಐತಿಹಾಸಿಕ ಮಲ್ಲಾರು ಕೋಟೆ, ನಂದಿಕೆರೆಯನ್ನಾದರೂ ಉಳಿಸುವಿರಾ ???

ಕಾಪು: ಸಾರ್ವಜನಿಕರಲ್ಲಿ ಇತಿಹಾಸ ಪ್ರಜ್ಞೆಯ ಕೊರತೆ, ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿರುವ ಜನಪ್ರತಿನಿಧಿಗಳ ಮತ್ತು ಸಂಘ ಸಂಸ್ಥೆಗಳವರ ನಿಷ್ಕಾಳಜಿ ಹಾಗೂ ಪುರಾತತ್ವ ಇಲಾಖೆಯ ಕಾಳಜಿ ರಹಿತ ಅಧಿಕಾರಿ ವರ್ಗದಿಂದಾಗಿ ನಮ್ಮ ನಾಡಿನ ಐತಿಹಾಸಿಕ ಮಹತ್ವದ ಅನೇಕ ಅರಮನೆ, ಕೋಟೆ ಕೊತ್ತಲ ಇತ್ಯಾದಿಗಳನ್ನು ಸಂರಕ್ಷಣೆಯಾಗಿ ಉಳಿಯದೆ, ನಾಮಾವಶೇಷಗೊಂಡಿದೆ, ಗೊಳ್ಳುತ್ತಿವೆ. ಒಂದಷ್ಟು ಸ್ಮಾರಕಗಳು ಅಳಿದುಳಿದಿವೆಯಾದರೂ ಇವುಗಳು ಸಹ ನಾಶದ ಅಂಚಿನಲ್ಲಿವೆ. ಸರ್ವರ ದಿವ್ಯ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣವೆನ್ನುವುದು ವಿಷಾದನೀಯ.

ನಂದಾವರ ಮತ್ತು ಉದ್ಯಾವರ ಇಲ್ಲಿನ ಅರಮನೆ ಮತ್ತು ಕೋಟೆಯನ್ನು ಸಂರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲಗೊಂಡಿರುವುದನ್ನು ನಾನು ಈಗಾಗಲೇ ಬರೆದಿದ್ದೇನೆ. ನಂದಾವರ ಮತ್ತು ಉದ್ಯಾವರದ ಸಾಲಿಗೆ ಸೇರ್ಪಡೆಗೊಂಡ ಇನ್ನೊಂದು ಐತಿಹಾಸಿಕ ಸ್ಥಳವೆಂದರೆ, ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಲ್ಲಾರು.

ಮಲ್ಲಾರುವಿನಲ್ಲಿದ್ದುದು ಅಂತಿಂಥ ಕೋಟೆಯೇನೂ ಅಲ್ಲ. ಅತ್ಯಂತ ಮಹತ್ವದ ಐತಿಹಾಸಿಕ ಕೋಟೆಯಾಗಿತ್ತು ಮಲ್ಲಾರಿನ ಕೋಟೆ ಮತ್ತು ಕೆರೆ ಹಾಗೂ ಇಲ್ಲಿದ್ದ ಕೆಲವು ಐತಿಹಾಸಿಕ ವಸ್ತುಗಳು. ಇವುಗಳ ಪೈಕಿ ಕೆರೆಯೊಂದು ನಾಶದ ಅಂಚಿನಲ್ಲಿದ್ದರೆ, ಉಳಿದವುಗಳು ಈಗಾಗಲೇ ಸಂಪೂರ್ಣ ನಾಶವಾಗಿವೆ.

ಮಲ್ಲಾರುವಿನ ಕೋಟೆ ಬರೋಬ್ಬರಿ ಹದಿನಾರು ಎಕರೆಗೂ ಅಧಿಕ ಸ್ಥಳದಲ್ಲಿ ವ್ಯಾಪಿಸಿತ್ತು. ಆದರೆ, ಇಂದು ಈ ಕೋಟೆಗೆ ಸಂಬಂಧಿಸಿದ ಒಂದೇ ಒಂದು ಕಲ್ಲು ಸಹ ನಮಗೆ ನೋಡಲು ಸಿಗುವುದಿಲ್ಲ.

ಕೊಟೆಯೊಳಗಡೆ ಇದ್ದ ದಿಬ್ಬಗಳನ್ನು ನೆಲಸಮಗೊಳಿಸಲಾಗಿದೆ. ಮಾತ್ರವಲ್ಲ, ಇಲ್ಲಿದ್ದ ಕೆಲವೊಂದು ಐತಿಹಾಸಿಕ ವಸ್ತುಗಳನ್ನು ಕೂಡಾ ನಾಶಗೊಳಿಸಲಾಗಿದೆ.

ಮಲ್ಲಾರಿನ ಕೋಟೆ, ವಿಜಯನಗರ ರಾಜರ ಆಡಳಿತ ಕಾಲದ್ದು ಎನ್ನುವುದೇ ಸಾಕು, ಈ ಕೋಟೆಯ ಮಹತ್ವವನ್ನು ಸಾರಿ ಹೇಳಲು. ಶಾಲಿವಾಹನ ಶಕ 1665ನೇ ರುಧಿರೋದ್ಗಾರಿ ಸಂವತ್ಸರದಲ್ಲಿ ಕಾಪು ಮರ್ದ ಹೆಗ್ಗಡೆ ಮಲ್ಲಾರಿನ ಕೋಟೆಯನ್ನು ಪುನರ್ನಿರ್ಮಿಸಿದ ಬಗ್ಗೆ ಮತ್ತು ಕಾಪು ಕಡಲ ಕಿನಾರೆಯಲ್ಲಿರುವ ಬೃಹತ್ ಬಂಡೆಯ ಮೇಲೆ ಕೋಟೆ ಇನ್ನೊಂದು ಕೋಟೆ (ಮನೋಹರಗಡ) ಕಟ್ಟಿಸಿದ ಬಗ್ಗೆ ಖ್ಯಾತ ಇತಿಹಾಸಕಾರರಾದ ಎಂ. ಗಣಪತಿ ರಾವ್ ಐಗಳ್ ಅವರ “ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚೀನ ಇತಿಹಾಸ” ಗ್ರಂಥದಲ್ಲಿ ಉಲ್ಲೇಖವಿದೆ.

1740ರ ದಶಕದ ಅವಧಿಯಲ್ಲಿ ಕೆಳದಿ ಸಂಸ್ಥಾನದ ಅಧೀನಕ್ಕೆ ಒಳಪಟ್ಟ ಬಳಿಕ, ಈ ಕೋಟೆ ಬಸಪ್ಪ ನಾಯಕನ ಆಡಳಿತದಲ್ಲಿದ್ದರೆ, ಆನಂತರ ಟಿಪ್ಪು ಸುಲ್ತಾನ್ ಕಾಲದಲ್ಲಿ ಟಿಪ್ಪುವಿನ ಆಡಳಿತಕ್ಕೆ ಒಳಪಟ್ಟಿತ್ತು ಈ ಐತಿಹಾಸಿಕ ಮಲ್ಲಾರಿನ ಕೋಟೆ.

                 ಕೋಟೆ ಇದ್ದ ಸ್ಥಳ

ನಾಲ್ಕೈದು ದಶಕದ ಹಿಂದಿನವರೆಗೂ ಕೆಲವು ಶಾಲೆಗಳ ಶಿಕ್ಷಕರು ಮಕ್ಕಳನ್ನು ಇಲ್ಕಿಗೆ ಕರೆದುಕೊಂಡು ಬಂದು ಈ ಕೋಟೆಯನ್ನು ತೋರಿಸುತ್ತಿದ್ದರು ಎಂಬ ವಿಷಯವನ್ನು ಗ್ರಾಮದ ಹಿರಿಯರು ನೆನಪುಮಾಡಿಕೊಳ್ಳುತ್ತಾರೆ.

ಟಿಪ್ಪು ಮರಣಾನಂತರ ಸಹಜವಾಗಿಯೇ ಕೋಟೆ ಬ್ರಿಟೀಷರ ಆಡಳಿತಕ್ಕೆ ಒಳಪಟ್ಟಿತು. ಟಿಪ್ಪು ಆಡಳಿತ ಕಾಲದಲ್ಲಿ ಕೊಟೆಯಲ್ಲಿದ್ದ ಐತಿಹಾಸಿಕ ಮಹತ್ವದ ಖಡ್ಗವೊಂದು ಇಂದಿಗೂ ಉಳಿದಿದ್ದು, ಇದು, ಮಲ್ಲಾರು ಕೋಟೆ ಬಳಿಯ “ಕಾಪು ಶ್ರೀ ಮಾರಿಯಮ್ಮ ದೇವಿಯ (ಶ್ರೀ ತ್ರಿಶಕ್ತಿ ಸನ್ನಿಧಿ) ಆದಿಸ್ಥಳದ ಮನೆಯಲ್ಲಿ “ಕೋಟೆ ಮಾರಿ” ಯೊಂದಿಗೆ ಗುಡಿಯಲ್ಲಿದೆ.

   ಕೋಟೆ ಮಾರಿ ಮತ್ತು            ಹಿನ್ನೆಲೆಯಲ್ಲಿ ಟಿಪ್ಪು               ಕಾಲದ ಖಡ್ಗ

“ಕೋಟೆ ಮಾರಿ” ನೆಲೆಯಾಗಿರುವ ಮೂಲ ಮನೆಯ ಗುಡಿಯೊಳಗೆ ಖಡ್ಗವೂ ಇದ್ದು, ಇದಕ್ಕೆ ವಾರ್ಷಿಕ ಆಯುಧ ಪೂಜೆಯ ದಿನದಂದು ಪೂಜೆಯನ್ನೂ ನಡೆಸಿಕೊಂಡು ಬರಲಾಗುತ್ತಿದೆ.

ಕೋಟೆ ಮಾರಿ ಮತ್ತು ಟಿಪ್ಪು ಕಾಲದ ಖಡ್ಗ ಹೊರತುಪಡಿಸಿದರೆ ಉಳಿದಿರುವ ಇನ್ನೊಂದು ಐತಿಹಾಸಿಕ ಸ್ಮಾರಕವೆಂದರೆ, ಅದು ನಂದಿಕೆರೆ ಅಥವಾ ನಿನ್ನಿಕೆರೆ. ಈ ಕೆರೆಯನ್ನು ಪ್ರಸ್ತುತ ಪೂರ್ಣವಾಗಿ ಗಿಡಗಂಟಿ ಆವರಿಸಿರುವುದರಿಂದ, ಇಲ್ಲೊಂದು ಕೆರೆ ಇದೆ ಎನ್ನುವುದನ್ನು ಯಾರೂ ಊಹಿಸಲೂ ಸಾಧ್ಯವಿಲ್ಲದಂತಾಗಿದೆ. ಕೆರೆಯನ್ನು ಈಗ ನೇರವಾಗಿ ನೋಡಲು ಸಾಧ್ಯವಿಲ್ಲವಾದರೂ ಕೆರೆ ಇದೆ, ಉಳಿದಿದೆ. ಮಲ್ಲಾರು ಕೋಟೆಯ ಅತ್ಯಂತ ಮಹತ್ವದ ಐತಿಹಾಸಿಕ ಸ್ಮಾರಕವಾದ ಕೆರೆ ಹೀಗೆ ಇಷ್ಟಾದರೂ ಉಳಿದಿರುವುದು ಒಂದಷ್ಟು ಸಮಾಧಾನಕರ ವಿಷಯವೇ ಆಗಿದೆ.

      ನಂದಿಕೆರೆ ಅಥವಾ ನಿನ್ನಿಕೆರೆ ಇರುವ ಸ್ಥಳ

ಕಾಪು ಪುರಸಭೆ, ಜಿಲ್ಲಾಡಳಿತ, ಪುರಾತತ್ವ ಇಲಾಖೆ ಇನ್ನಾದರೂ ಈ ನಂದಿಕೆರೆ (ನಿನ್ನಿಕೆರೆ) ಯನ್ನು ಪುನರುಜ್ಜೀವನಗೊಳಿಸಬೇಕಾಗಿದೆ. ಉದ್ಯೋಗ ಖಾತರಿ ಯೋಜನೆಯ ಮೂಲಕವೋ, ಕೆರೆ ಅಭಿವೃದ್ಧಿ ಪ್ರಾಧಿಕಾರದ ಮೂಲಕವೋ, ಏನಾದರೂ ಮಾಡಿ ಈ ಕೆರೆಯನ್ನು ಉಳಿಸುವ ಮಹತ್ಕಾರ್ಯವನ್ನು ಜನಪ್ರತಿನಿಧಿಗಳು ಮಾಡಲೇಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಇಚ್ಛಾಶಕ್ತಿಯನ್ನು ಪ್ರದರ್ಶಿಸಲೇಬೇಕಾಗಿದೆ.

~ ಶ್ರೀರಾಮ ದಿವಾಣ

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

23 hours ago