Featured

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಅರುಣ್ ಸಿಂಗ್ -Vishwanews24

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಅರುಣ್ ಸಿಂಗ್ -Vishwanews24

ಬೆಂಗಳೂರು: ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ, ಕೇವಲ ಇಬ್ಬರು, ಮೂವರು ಈ ಬಗ್ಗೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಅವರ ಮನವೊಲಿಕೆ ಕೆಲಸ ಸಹ ನಡೆಯುತ್ತಿದೆ. ಒಂದು ವೇಳೆ ಸುಮ್ಮನಾಗದಿದ್ದರೆ ಸೂಕ್ತ ಕ್ರಮವನ್ನು ಸಹ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಬಿಜೆಪಿ ಕಚೇರಿಯಲ್ಲಿ 15 ಶಾಸಕರು ಸೇರಿ ಹಲವು ನಾಯಕರೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಯಾವ ಶಾಸಕರ ಬಳಿಯೂ ನಾನು ಚರ್ಚಿಸಿಲ್ಲ. ಈ ಕುರಿತು ಚರ್ಚಿಸುವುದಾದರೆ ಎಲ್ಲ ನಾಯಕರೊಂದಿಗೆ ಸಭೆ ನಡೆಸುತ್ತಿದ್ದೆ. ಪಕ್ಷದಲ್ಲಿ ಒಬ್ಬಬ್ಬಿರು ಇಂತಹ ನಾಯಕರು ಇದ್ದಾರೆ, ಇದರಿಂದಾಗಿ ಪಕ್ಷಕ್ಕೆ ಮುಜುಗರವಾಗುತ್ತಿರುವುದು ಸತ್ಯ. ಪಕ್ಷದ ಸಂಘಟನೆ, ನಾಯಕರ ಹೇಳಿಕೆಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪರಿಶೀಲಿಸುತ್ತಿದ್ದಾರೆ. ಆದರೆ ಯಾರೂ ಸಹ ಮಾಧ್ಯಮದ ಮುಂದೆ ಮಾತನಾಡಿ, ಪಕ್ಷಕ್ಕೆ ಮುಜುಗರವನ್ನುಂಟು ಮಾಡಬೇಡಿ ಎಂದು ಎಚ್ಚರಿಸಿದರು.

ಕೇವಲ ಇಬ್ಬರು, ಮೂವರು ಹೇಳಿಕೆ ನೀಡುವ ಮೂಲಕ ರಾಜ್ಯದ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಈ ಕುರಿತು ನಾವು ಖಂಡಿತವಾಗಿಯೂ ಲಕ್ಷ್ಯ ವಹಿಸುತ್ತೇವೆ. ಇದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿದಿದೆ, ನಮಗೂ ಈ ಕುರಿತು ಗೊತ್ತಿದೆ. ಅವರ ಮನವೊಲಿಸುವ ಪ್ರಕ್ರಿಯೆ ಸಹ ನಡೆಯುತ್ತಿದೆ. ಮಾತು ಕೇಳದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆಲ ಹೊಸಬರು ನಾಯಕತ್ವದ ಬಗ್ಗೆ ಮಾತನಾಡುತ್ತಿರುವುದನ್ನು ಪಕ್ಷದ ನಾಯಕರು ತಿಳಿಸಿದರು. ಅವರಿಗೆ ಪಕ್ಷದ ರೀತಿ, ನೀತಿ, ಸಿದ್ಧಾಂತ ತಿಳಿದಿಲ್ಲ, ಹೀಗಾಗಿ ಮಾತನಾಡುತ್ತಿದ್ದಾರೆ. ನಮ್ಮ ಲಕ್ಷಾಂತರ ಕಾರ್ಯಕರ್ತರು ತಮ್ಮ ಜೀವನನ್ನು ಪಣಕ್ಕಿಟ್ಟು ಪಕ್ಷವನ್ನು ಸಂಘಟಿಸಿ, ಉನ್ನತ ಸ್ಥಾನದಲ್ಲಿರಿಸಿದ್ದಾರೆ. ಆದರೆ ಕೆಲ ಹೊಸಬರಿಗೆ ಪಕ್ಷದ ಸಂಸ್ಕøತಿ, ರೀತಿ, ನೀತಿ ಗೊತ್ತಿಲ್ಲ. ಈ ರೀತಿಯ ಹೇಳಿಕೆಯನ್ನು ನೀಡುವ ಮೂಲಕ ಪಕ್ಷಕ್ಕೆ ನಷ್ಟವನ್ನುಂಟುಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಎಚ್ಚರಿಕೆ ನೀಡಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago