Featured

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಅರುಣ್ ಸಿಂಗ್ -Vishwanews24

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ಅರುಣ್ ಸಿಂಗ್ -Vishwanews24

ಬೆಂಗಳೂರು: ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ, ಕೇವಲ ಇಬ್ಬರು, ಮೂವರು ಈ ಬಗ್ಗೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಅವರ ಮನವೊಲಿಕೆ ಕೆಲಸ ಸಹ ನಡೆಯುತ್ತಿದೆ. ಒಂದು ವೇಳೆ ಸುಮ್ಮನಾಗದಿದ್ದರೆ ಸೂಕ್ತ ಕ್ರಮವನ್ನು ಸಹ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಬಿಜೆಪಿ ಕಚೇರಿಯಲ್ಲಿ 15 ಶಾಸಕರು ಸೇರಿ ಹಲವು ನಾಯಕರೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಯಾವ ಶಾಸಕರ ಬಳಿಯೂ ನಾನು ಚರ್ಚಿಸಿಲ್ಲ. ಈ ಕುರಿತು ಚರ್ಚಿಸುವುದಾದರೆ ಎಲ್ಲ ನಾಯಕರೊಂದಿಗೆ ಸಭೆ ನಡೆಸುತ್ತಿದ್ದೆ. ಪಕ್ಷದಲ್ಲಿ ಒಬ್ಬಬ್ಬಿರು ಇಂತಹ ನಾಯಕರು ಇದ್ದಾರೆ, ಇದರಿಂದಾಗಿ ಪಕ್ಷಕ್ಕೆ ಮುಜುಗರವಾಗುತ್ತಿರುವುದು ಸತ್ಯ. ಪಕ್ಷದ ಸಂಘಟನೆ, ನಾಯಕರ ಹೇಳಿಕೆಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪರಿಶೀಲಿಸುತ್ತಿದ್ದಾರೆ. ಆದರೆ ಯಾರೂ ಸಹ ಮಾಧ್ಯಮದ ಮುಂದೆ ಮಾತನಾಡಿ, ಪಕ್ಷಕ್ಕೆ ಮುಜುಗರವನ್ನುಂಟು ಮಾಡಬೇಡಿ ಎಂದು ಎಚ್ಚರಿಸಿದರು.

ಕೇವಲ ಇಬ್ಬರು, ಮೂವರು ಹೇಳಿಕೆ ನೀಡುವ ಮೂಲಕ ರಾಜ್ಯದ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಈ ಕುರಿತು ನಾವು ಖಂಡಿತವಾಗಿಯೂ ಲಕ್ಷ್ಯ ವಹಿಸುತ್ತೇವೆ. ಇದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿದಿದೆ, ನಮಗೂ ಈ ಕುರಿತು ಗೊತ್ತಿದೆ. ಅವರ ಮನವೊಲಿಸುವ ಪ್ರಕ್ರಿಯೆ ಸಹ ನಡೆಯುತ್ತಿದೆ. ಮಾತು ಕೇಳದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆಲ ಹೊಸಬರು ನಾಯಕತ್ವದ ಬಗ್ಗೆ ಮಾತನಾಡುತ್ತಿರುವುದನ್ನು ಪಕ್ಷದ ನಾಯಕರು ತಿಳಿಸಿದರು. ಅವರಿಗೆ ಪಕ್ಷದ ರೀತಿ, ನೀತಿ, ಸಿದ್ಧಾಂತ ತಿಳಿದಿಲ್ಲ, ಹೀಗಾಗಿ ಮಾತನಾಡುತ್ತಿದ್ದಾರೆ. ನಮ್ಮ ಲಕ್ಷಾಂತರ ಕಾರ್ಯಕರ್ತರು ತಮ್ಮ ಜೀವನನ್ನು ಪಣಕ್ಕಿಟ್ಟು ಪಕ್ಷವನ್ನು ಸಂಘಟಿಸಿ, ಉನ್ನತ ಸ್ಥಾನದಲ್ಲಿರಿಸಿದ್ದಾರೆ. ಆದರೆ ಕೆಲ ಹೊಸಬರಿಗೆ ಪಕ್ಷದ ಸಂಸ್ಕøತಿ, ರೀತಿ, ನೀತಿ ಗೊತ್ತಿಲ್ಲ. ಈ ರೀತಿಯ ಹೇಳಿಕೆಯನ್ನು ನೀಡುವ ಮೂಲಕ ಪಕ್ಷಕ್ಕೆ ನಷ್ಟವನ್ನುಂಟುಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಎಚ್ಚರಿಕೆ ನೀಡಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago