ಕಲಬುರಗಿ: ವಿವಿಧ ಕಡೆ ಬಿಜೆಪಿಯೇತರ ನಾಯಕರುಗಳನ್ನು ಬ್ಲಾಕ್ಮೇಲ್ ಮಾಡಲು ಭಾರತೀಯ ಜನತಾ ಪಕ್ಷ ಸಿಬಿಐ, ಐಟಿ, ಇಡಿ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿಂದು ಸುದ್ದಿಗಾರರದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ಥಿರಗೊಳ್ಳುತ್ತಿದೆ. ಹೀಗಾಗಿ ವಿರೋಧ ಪಕ್ಷಗಳನ್ನು ನಿಯಂತ್ರಣದಲ್ಲಿಡಬೇಕೆಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನಿಕ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಪರ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಇಲ್ಲದೆಯೇ ರಾತ್ರೋರಾತ್ರಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿದರು ಎಂದು ದೂರಿದ ಪ್ರಿಯಾಂಕ್ ಖರ್ಗೆ ಅವರು, ಈ ರಾಜಕೀಯ ಹುನ್ನಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…