ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಕುರಿತು ರಾಷ್ಟ್ರಮಟ್ಟದಲ್ಲಿ ಅಪಸ್ವರ ಎದ್ದಿರುವ ಬೆನ್ನಲ್ಲೇ, ನಾಯಕತ್ವವನ್ನು ಟೀಕಿಸುತ್ತಿರುವ ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ‘ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.
‘ಪಕ್ಷದ ಕೆಲವು ನಾಯಕರು ಪಕ್ಷ ಮತ್ತು ನಮ್ಮ ನಾಯಕರ ವಿರುದ್ಧವೇ ಮಾತನಾಡಿರುವುದು ನೋವುಂಟು ಮಾಡಿದೆ’ ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಹೇಳಿದರು.
‘ಒಂದು ಕಡೆ ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ಬೆನ್ನ ಹಿಂದಿವೆ. ಇನ್ನೊಂದು ಕಡೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಿತ್ತಾಟ ನಡೆದಿದೆ. ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಾ ಹೋದರೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಪಕ್ಷದ ಸಿದ್ಧಾಂತ ನಾಶವಾದರೆ, ನಾವೆಲ್ಲ ನಾಶವಾಗುತ್ತೇವೆ’ ಎಂದು ಎಚ್ಚರಿಸಿದರು.
ಬಿಹಾರ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಕಾರಣ ನಾಯಕತ್ವದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಖರ್ಗೆ ಅವರು ‘ಗಾಂಧಿ ಪರಿವಾರ’ವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
‘ಗಾಂಧಿ ಪರಿವಾರ ಮತ್ತು ನಾಯಕತ್ವವನ್ನು ಟೀಕಿಸುತ್ತಿರುವವರು ತಾವಿರುವ ಪ್ರದೇಶದಲ್ಲಿ ಒಬ್ಬ ಕಾರ್ಪೋರೇಟರ್ ಅನ್ನು ಗೆಲ್ಲಿಸುವ ಶಕ್ತಿ ಹೊಂದಿಲ್ಲ. ಪಕ್ಷ ಸುಸ್ಥಿತಿಯಲ್ಲಿ ಇದ್ದಾಗ ಎಲ್ಲರೂ ಹೊಗಳುತ್ತಾರೆ. ಸೋತಾಗ ಅದಕ್ಕೆ ರಾಹುಲ್ ಗಾಂಧಿ, ಸೋನಿಯಾಗಾಂಧಿ ಕಾರಣರೆಂದು ಗೂಬೆ ಕೂರಿಸುತ್ತಾರೆ’ ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…