ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ತಾಲೂಕಿನ ಬಣಕಲ್, ಕಸಬಾ, ಗೋಣಿಬೀಡು, ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ತಾವು ಸಂಸದರಾಗಿದ್ದಾಗ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು ಆದರೆ ನಂತರ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ. ಅಲ್ಲದೇ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಕೂಡ ಆಗಿದ್ದರು ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ. ಪೆಟ್ರೋಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೇ ಕೇವಲ ಮೋದಿ ಹೆಸರೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.
ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕಪ್ಪು ಹಣ ತಂದು ಎಲ್ಲರ ಅಕೌಂಟ್ ಗೆ 15 ಲಕ್ಷ ಹಾಕುತ್ತೇವೆಂದು ಇದುವರೆಗೂ ಹಾಕಿಲ್ಲ. ಆ ಕಪ್ಪು ಹಣ ಕಪ್ಪಾಗಿಯೇ ಉಳಿದಿದೆ. ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವವರು ಚುನಾವಣೆ ಬಾಂಡ್ ಹಣಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರಿಂಕೋರ್ಟ್ ಬಯಲಿಗೆಳೆದಿದೆ. ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಯಾರಿಗೂ ಬರುತ್ತಿಲ್ಲ. ರಾಜ್ಯ ಸರಕಾರ 5 ಗ್ಯಾರಂಟಿ ನೀಡಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೂಡ 5 ಗ್ಯಾರಂಟಿ ಘೋಷಿಸಿದೆ. ಇದರಿಂದ ಜನರ ಸಂಕಷ್ಠ ನಿವಾರಣೆಯಾಗುತ್ತದೆ ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…