Featured

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ – Vishwanews24

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ

ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ತಾಲೂಕಿನ ಬಣಕಲ್, ಕಸಬಾ, ಗೋಣಿಬೀಡು, ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ತಾವು ಸಂಸದರಾಗಿದ್ದಾಗ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು ಆದರೆ ನಂತರ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ. ಅಲ್ಲದೇ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಕೂಡ ಆಗಿದ್ದರು ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ. ಪೆಟ್ರೋಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೇ ಕೇವಲ ಮೋದಿ ಹೆಸರೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕಪ್ಪು ಹಣ ತಂದು ಎಲ್ಲರ ಅಕೌಂಟ್ ಗೆ 15 ಲಕ್ಷ ಹಾಕುತ್ತೇವೆಂದು ಇದುವರೆಗೂ ಹಾಕಿಲ್ಲ. ಆ ಕಪ್ಪು ಹಣ ಕಪ್ಪಾಗಿಯೇ ಉಳಿದಿದೆ. ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವವರು ಚುನಾವಣೆ ಬಾಂಡ್ ಹಣಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರಿಂಕೋರ್ಟ್ ಬಯಲಿಗೆಳೆದಿದೆ. ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಯಾರಿಗೂ ಬರುತ್ತಿಲ್ಲ. ರಾಜ್ಯ ಸರಕಾರ 5 ಗ್ಯಾರಂಟಿ ನೀಡಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೂಡ 5 ಗ್ಯಾರಂಟಿ ಘೋಷಿಸಿದೆ. ಇದರಿಂದ ಜನರ ಸಂಕಷ್ಠ ನಿವಾರಣೆಯಾಗುತ್ತದೆ ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

24 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

24 hours ago