ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ರೇಬಿಸ್ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.
8ನೇ ತರಗತಿಯ ವಿದ್ಯಾರ್ಥಿ ಶಹವಾಜ್ ಮೃತ ಬಾಲಕ.
ಶಹವಾಜ್ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಬುಲಂದ್ಶಹರ್ನಿಂದ ಗಾಜಿಯಾಬಾದ್ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ.
ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.
ಕೂಡಲೇ ಶಹವಾಜ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ಆತನನ್ನು ವೈದ್ಯರು ದಾಖಲಿಸಿಕೊಳ್ಳದೆ ಔಷಧಿ ಕೊಟ್ಟು ಕಳುಹಿಸಿದ್ದಾರೆ. ಆ ಬಳಿಕ ಕಳೆದ ವಾರ ಆಯುರ್ವೇದಿಕ್ ಔಷಧಿಯ ಮೊರೆ ಹೋಗಿರುವುದಾಗಿ ಪೊಲೀಸರ ಬಳಿ ಪೋಷಕರು ತಿಳಿಸಿದ್ದಾರೆ.
ಅಂಬುಲೆನ್ಸ್ನಲ್ಲಿ ಗಾಜಿಯಾಬಾದ್ಗೆ ವಾಪಸ್ ಕರೆತರುವಾಗ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ದೂರು ದಾಖಲಾಗಿದ್ದು, ನಾಯಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೊತ್ವಾಲಿ ವಲಯದ ಸಹಾಯಕ ಪೊಲೀಸ್ ಆಯುಕ್ತ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…