ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ  ಶಿಕ್ಷಣ ಸಚಿವರಲ್ಲಿ  ಮನವಿ – Vishwanews24

Featured, ರಾಜ್ಯ ನ್ಯೂಸ್

ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ  ಶಿಕ್ಷಣ ಸಚಿವರಲ್ಲಿ  ಮನವಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಸಚಿವರಾದ ವಿ ಸುನಿಲ್ ಕುಮಾರ್ ರವರು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರವರನ್ನು ಭೇಟಿ ಮಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ ಮನವಿ ಮಾಡಿದರು.

ಈ ಬಾರಿ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ. ಕಾರಣ ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ.

ಕಾಪು: ಸ್ಕೂಟರ್ ನಲ್ಲಿ ಅಕ್ರಮ ಗೋ ಮಾಂಸ ಮಾರಾಟ : ಇಬ್ಬರು ಪೊಲೀಸ್ ವಶಕ್ಕೆ – Vishwanews24

ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತತ್ವ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮ, ಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಸಚಿವರು ಮನವಿಯಲ್ಲಿ ವಿನಂತಿಸಿದ್ದಾರೆ

Leave a Reply