ಬೆಂಗಳೂರು: ನಾಲ್ಕು ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಸರ್ಕಾರ ಮತ್ತು ಸಾರಿಗೆ ನೌಕರರ ಸಂಘರ್ಷಕ್ಕೆ ತಾತ್ಕಾಲಿಕ ಸಮಾಪ್ತಿ ದೊರಕಿದೆ.
ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ಘೋಷಣೆ ಹೊರಡಿಸಿದ ಕೋಡಿಹಳ್ಳಿ ಚಂದ್ರಶೇಖರ್, 10 ಬೇಡಿಕೆಗಳಲ್ಲಿ ಸರ್ಕಾರ 9 ಅನ್ನು ಈಡೇರಿಸಿದೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆಯೊಂದೇ ಬಾಕಿ ಉಳಿದಿದೆ. ಇದರ ಈಡೇರಿಕೆಗಾಗಿ ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳೊಳಗಾಗಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದಿದ್ದರೇ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಾತ್ರವಲ್ಲದೆ ರಾಜ್ಯಾದ್ಯಂತ ಮುಷ್ಕರವನ್ನು ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಎಲ್ಲಾ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಘೋಷಣೆ ಹೊರಡಿಸಿದ್ದಾರೆ.
ಇದೀಗ ಮುಷ್ಕರ ಹಿಂಪಡೆಯಲಾಗಿದ್ದು, ರಾಜ್ಯದೆಲ್ಲೆಡೆ ಸರ್ಕಾರಿ ಬಸ್ ಗಳ ಸಂಚಾರ ಆರಂಭಗೊಂಡಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…