ಮುಂಬೈ:ವಾಣಿಜ್ಯ ನಗರಿ ಮುಂಬೈಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ರೈಲ್ವೆ ಹಳಿಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅತಿಯಾದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು, ರೈಲ್ವೆ ಹಳಿಗಳು ಹಾಗೂ ಅನೇಕ ಮನೆಗಳು ಜಲಾವೃತಗೊಂಡಿವೆ. ನಗರದ ಡಾಡರ್ ಈಸ್ಟ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಶಾಲಾ ಮಕ್ಕಳು ನೀರಿನಲ್ಲಿಯೇ ನಡೆದುಕೊಂಡು ಶಾಲೆಗೆ ಹೋಗಲು ಪರದಾಡುತ್ತಿದ್ದಾರೆ
ಬಾಂದ್ರಾ, ಪರೇಲ್ ಮತ್ತು ದಾದರ್ ಪ್ರದೇಶಗಳಲ್ಲಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ ವೇಳೆ ಕನಿಷ್ಠ 100 ಮಿ.ಮೀಟರ್ ಮಳೆ ಸುರಿದಿದೆ. ರಾತ್ರಿಯಿಡೀ ಬರೋಬ್ಬರಿ 360 ಮಿಲಿ ಮೀಟರ್ ದಾಖಲೆಯ ಮಳೆ ಸುರಿದಿರುವುದಾಗಿ ವರದಿ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…